ರಾಜ್ಯಪಾಲ ವಜೂಭಾಯಿ ವಾಲಾ 
ರಾಜ್ಯ

ಮಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ ವಿಸ್ತರಣೆಗೆ ರಾಜ್ಯಪಾಲರಿಂದ ಚಾಲನೆ

ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ವಿಸ್ತರಣೆಗೆ ರಾಜ್ಯಪಾಲ ವಜೂಭಾಯಿ ವಾಲಾ ಇಂದು ಶಂಕುಸ್ಥಾಪನೆ ನೆರವೇರಿಸಿದರು.

ಮಂಗಳೂರು: ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್  ವಿಸ್ತರಣೆಗೆ ರಾಜ್ಯಪಾಲ ವಜೂಭಾಯಿ ವಾಲಾ ಇಂದು ಶಂಕುಸ್ಥಾಪನೆ ನೆರವೇರಿಸಿದರು.

 ಪ್ರಸ್ತುತ ಟರ್ಮಿನಲ್  ವಿಸ್ತಾರ 19, 509 ಚದರ ಮೀಟರ್ ಇದೆ. ಹೊಸದಾಗಿ 11, 343 ಚದರ ಮೀಟರ್ ವಿಸ್ತೀರ್ಣದ ಟರ್ಮಿನಲ್  ನಿರ್ಮಿಸಲಾಗುತ್ತಿದೆ.

ಈಗ ದಟ್ಟಣೆಯ ಅವಧಿಯಲ್ಲಿ ಪ್ರತಿ ಗಂಟೆಗೆ 730 ಪ್ರಯಾಣಿಕರಿಗೆ ಬೋರ್ಡಿಂಗ್ ಅವಕಾಶ ಕಲ್ಪಿಸುವ ಸಾಮರ್ಥ್ಯ ಇದೆ. ಹೊಸ ಟರ್ಮಿನಲ್ ನಿರ್ಮಾಣದ ಬಳಿಕ ಪ್ರತಿ ಗಂಟೆಗೆ 1 ಸಾವಿರ ಪ್ರಯಾಣಿಕರಿಗೆ ಬೋರ್ಡಿಂಗ್ ಗೆ ಅವಕಾಶ ಕಲ್ಪಿಸುವ ಸಾಮರ್ಥ್ಯ ದೊರಕಲಿದೆ.  ವಾರ್ಷಿಕ ಪ್ರಯಾಣಿಕರ ಸಂಖ್ಯೆ 20 ಲಕ್ಷದಿಂದ 30 ಲಕ್ಷಕ್ಕೆ ಹೆಚ್ಚಲಿದೆ ಎನ್ನಲಾಗಿದೆ.

ಅಂತಾರಾಷ್ಟ್ರೀಯ ಪ್ರಯಾಣಿಕರ ವಿಭಾಗದಲ್ಲಿ ಎರಡು ಹೊಸ ಬ್ಯಾಗೇಜ್ ಕನ್ವೆಯರ್ ಮತ್ತು ದೇಶಿಯ ಪ್ರಯಾಣಿಕರ ವಿಭಾಗದಲ್ಲಿ ಒಂದು ಹೊಸ ಕನ್ವೆಯರ್ ಅಳವಡಿಸಲಾಗುತ್ತದೆ. ಎರಡು ಹೊಸ ಪ್ರಯಾಣಿಕರ ಬೋರ್ಡಿಂಗ್ ಸೇತುವೆಗಳನ್ನು ನಿರ್ಮಿಸಲಾಗುತ್ತದೆ.
ಪ್ರಯಾಣಿಕರ ವಿಶ್ರಾಂತಿಗೆ ಬೃಹತ್ ಕೊಠಡಿ, ಉಪಹಾರ ಗೃಹ, ಪ್ರಯಾಣಿಕರ ಭೇಟಿಗೆ ಸ್ಥಳಾವಕಾಶ, ಪ್ರಥಮ  ಚಿಕಿತ್ಸಾ ಕೊಠಡಿಗಳನ್ನು ಈ ಯೋಜನೆಯಲ್ಲಿ ನಿರ್ಮಿಸಲಾಗುತ್ತದೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT