ರಾಜ್ಯದ ರೈಲು ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಸಿದ ಬಾಂಬ್ ಬೆದರಿಕೆ ಕರೆ 
ರಾಜ್ಯ

ರಾಜ್ಯದ ರೈಲು ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಸಿದ ಬಾಂಬ್ ಬೆದರಿಕೆ ಕರೆ

‘ರೈಲು ನಿಲ್ದಾಣದಲ್ಲಿ ಬಾಂಬ್ ಇಡಲಾಗಿದೆ’ ಈ ಒಂದು ದೂರವಾಣಿ ಕರೆ ರೈಲು ಪ್ರಯಾಣಿಕರ ಆತಂಕ, ರೈಲ್ವೆ ಪೊಲೀಸರು ಹಾಗೂ ಅಧಿಕಾರಿಗಳ ಬಿರುಸಿನ ತಪಾಸಣೆಗೆ ಕಾರಣವಾಗಿತ್ತು

ಮೈಸೂರು: ‘ರೈಲು ನಿಲ್ದಾಣದಲ್ಲಿ ಬಾಂಬ್ ಇಡಲಾಗಿದೆ’ ಈ ಒಂದು ದೂರವಾಣಿ ಕರೆ ರೈಲು ಪ್ರಯಾಣಿಕರ ಆತಂಕ, ರೈಲ್ವೆ ಪೊಲೀಸರು ಹಾಗೂ ಅಧಿಕಾರಿಗಳ ಬಿರುಸಿನ ತಪಾಸಣೆಗೆ ಕಾರಣವಾಗಿತ್ತು.  ಆದರೆ ಹುಸಿ ಬಾಂಬ್ ಕರೆ ಎಂದು ತಿಳಿದುಬಂದಾಗ ಎಲ್ಲರೂ ನಿಟ್ಟುಸಿರಿಟ್ಟಿದ್ದಾರೆ.
ಶುಕ್ರವಾರ ಮುಂಜಾನೆ ರೈಲ್ವೆ ಅಧಿಕಾರಿಗಳಿಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ರೈಲು ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವುದಾಗಿ ತಿಳಿಸಿದ್ದ.  ಆದರೆ ಯಾವ ನಿಲ್ದಾಣ ಎಂದು ಸೂಚಿಸಿರಲಿಲ್ಲ.  ಹೀಗಾಗಿ ಮೈಸೂರು ನಗರ ರೈಲ್ವೆ ಸೇರಿದಂತೆ ಎಲ್ಲ ನಿಲ್ದಾಣಗಳಲ್ಲೂ ತಪಾಸಣೆ ಆರಂಭಿಸಲಾಯಿತು.
ಬಾಂಬ್ ನಿಷ್ಕ್ರಿಯ ದಳ ಹಾಗೂ ಪೊಲೀಸರು ಪ್ರಯಾಣಿಕರಿದ್ದ ರೈಲುಗಳನ್ನು ನಿಲ್ಲಿಸಿ ತಪಾಸಣೆಗೆ ಮುಂದಾದರು. ಎಲ್ಲಿಯೂ ಬಾಂಬ್ ಪತ್ತೆಯಾಗದ ಕಾರಣ ‘ಹುಸಿ ಬಾಂಬ್ ಕರೆ’ ಪ್ರಕರಣ ದಾಖಲಿಸಿಕೊಳ್ಳಲಾಯಿತು ಎಂದು ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇತ್ತ ಚಾಮರಾಜನಗರ, ಬಾಗಲಕೋಟೆ ನಿಲ್ದಾಣಗಳಲ್ಲಿ ಸಹ "ಬಾ<ಬ್" ಇದೆ ಎನ್ನುವ ಹುಸಿ ಕರೆಗಳು ಬಂದಿದ್ದು ಅಲ್ಲಿ ಸಹ ತಪಾಸಣೆ ನಡೆದ ವರದಿಯಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

SCROLL FOR NEXT