ವಿಜಯಪುರ: ಸಹೋದರರಿಬ್ಬರ ಭೀಕರ ಕೊಲೆ! 
ರಾಜ್ಯ

ವಿಜಯಪುರ: ಸಹೋದರರಿಬ್ಬರ ಭೀಕರ ಕೊಲೆ!

ಹಳೆ ವೈಷಮ್ಯದ ಕಾರಣ ದುಷ್ಕರ್ಮಿಗಳು ಸಹೋದರರಿಬ್ಬರನ್ನು ಭೀಕರವಾಗಿ ಕೊಲೆ ಮಾಡುರುವ ಘಟನೆ ವಿಜಯಪುರದಲ್ಲಿ ನಡೆದಿದೆ

ವಿಜಯಪುರ: ಹಳೆ ವೈಷಮ್ಯದ ಕಾರಣ ದುಷ್ಕರ್ಮಿಗಳು ಸಹೋದರರಿಬ್ಬರನ್ನು ಭೀಕರವಾಗಿ ಕೊಲೆ ಮಾಡುರುವ ಘಟನೆ ವಿಜಯಪುರದಲ್ಲಿ ನಡೆದಿದೆ. ವಿಜಯಪುರ ನಗರದ ಜೈ ಕರ್ನಾಟಕ ಕಾಲೋನಿಯಲ್ಲಿ ಶನಿವಾರ ಬೆಳ್ಳಂಬೆಳಿಗ್ಗೆ ಈ ಘಟನೆ ನಡೆದಿದ್ದು ನಗರದ ಜನತೆ ಬೆಚ್ಚಿ ಬಿದ್ದಿದ್ದಾರೆ.
ಸಲೀಂ ಅಬ್ದುಲ ಗಣಿ ಕೋಚಮನ(35) ಹಾಗೂ  ರಜಾಕ್ ಅಬ್ದುಲ್ ಗಣಿ ಕೋಚಮನ(28)  ಎಂಬ ಸೋದರರು ಹತ್ಯೆಗೀಡಾದ ದುರ್ದೈವಿಗಳು. ದುಷ್ಕರ್ಮಿಅಗ್ಳು ಜೋಡಿ ಕೊಲೆ ನಡೆಸಿದ್ದಲ್ಲದೆ ಇಬ್ಬರ ಶವಗಳನ್ನು ಬೇರೆ ಬೇರೆ ಕಡೆ ಎಸೆದಿದ್ದರು.
ಸಲೀಂ  ನನ್ನು ಕೊಂದು ಕಾಲೋನಿಯ ಸಮೀಪವೇ ಎಸೆದು ಹೋದರೆ, ಅವನ ತಮ್ಮ ರಜಾಕ್ ನನ್ನು ಹತ್ಯೆ ಮಾಡಿ ನಗರದ ಸರ್ಕಾರಿ ಕಾಲೇಜಿನ ಆವರಣದಲ್ಲಿ ಎಸೆಯಲಾಗಿತ್ತು.
ಮೃತರು ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಹಳೆ ದ್ವೇಷದಿಂಡ ಈ ಕೃತ್ಯ ನಡೆದಿರಬಹುದು ಎಂದು ಪೋಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.
ಘಟನೆ ಸಂಬಂಧ ವಿಜಯಪುರ ಗಾಂಧಿ ಚೌಕ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT