ಐಶ್ವರ್ಯಾ ರೈ 
ರಾಜ್ಯ

ಹುಟ್ಟೂರು ಮಂಗಳೂರಿಗೆ ಆಗಮಿಸಿದ ಐಶ್ವರ್ಯಾ ರೈ ಬಚ್ಚನ್

ಮಾಜಿ ವಿಶ್ವ ಸುಂದರಿ, ಬಾಲಿವುಡ್ ಖ್ಯಾತ ನಟಿ ಐಶ್ವರ್ಯಾ ರೈ ಅವರು ಇಂದು ಕದಲತಡಿ ನಗರ ಮಂಗಳೂರಿಗೆ ಆಗಮಿಸಿದ್ದಾರೆ.

ಮಂಗಳೂರು: ಮಾಜಿ ವಿಶ್ವ ಸುಂದರಿ, ಬಾಲಿವುಡ್ ಖ್ಯಾತ ನಟಿ ಐಶ್ವರ್ಯಾ ರೈ ಅವರು ಇಂದು ಕದಲತಡಿ ನಗರ ಮಂಗಳೂರಿಗೆ ಆಗಮಿಸಿದ್ದಾರೆ.

ಐಶ್ವರ್ಯಾ ರೈ ಅವರು ತಮ್ಮ ಪತಿ ನಟ ಅಭಿಷೇಕ್ ಬಚ್ಚನ್ ಅವರೊಂದಿಗೆ ಮಂಗಳೂರಿಗೆ ಬಂದಿದ್ದು, ಇತ್ತೀಚಿಗೆ ನಿಧನರಾದ ತಮ್ಮ ಚಿಕ್ಕಪ್ಪ  ದೀನನಾಥ್ ಶೆಟ್ಟಿ ಅವರ ಶ್ರಾದ್ಧ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಕದ್ರಿ ದೇವಸ್ಥಾನದಲ್ಲಿ  ಚಿಕ್ಕಪ್ಪ ದೀನನಾಥ್  ಶ್ರಾದ್ಧದಲ್ಲಿ ಪಾಲ್ಗೊಂಡ ಬಳಿಕ ವಾಪಾಸ್  ಮುಂಬೈಗೆ ಐಶ್ವರ್ಯಾ ಹಾಗೂ ಅಭಿಷೇಕ್ ಜೋಡಿ ಪ್ರಯಾಣ ಬೆಳೆಸಲಿದ್ದಾರೆ ಎಂಬುದು ಅವರ ಕುಟುಂಬ ಮೂಲಗಳಿಂದ ತಿಳಿದುಬಂದಿದೆ.

ನಟಿ ಐಶ್ವರ್ಯಾ ರೈ  ಅವರು ಮೂಲತ: ಮಂಗಳೂರಿನವರು. ಅವರ ಹತ್ತಿರದ ಕುಟುಂಬಸ್ಥರು ಈಗಲೂ ಮಂಗಳೂರಿನಲ್ಲಿಯೇ ನೆಲೆಸಿದ್ದಾರೆ. ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಅವರ ಮಗ ಅಭಿಷೇಕ್ ಬಚ್ಚನ್ ಅವರನ್ನು ಮದುವೆಯಾದ ಬಳಿಕ ಐಶ್ವರ್ಯಾ ರೈ ಮುಂಬೈಯಲ್ಲಿಯೇ ವಾಸಿಸುತ್ತಿದ್ದಾರೆ.

ಐಶ್ವರ್ಯಾ ರೈ ಹಾಗೂ ಅಭಿಷೇಕ್  ದಂಪತಿಗೆ ಆರಾಧ್ಯ ಎಂಬ ಮಗಳಿದ್ದಾಳೆ. ಆದರೆ, ಮಂಗಳೂರಿಗೆ ಆಕೆ ಬಂದಿರಲಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT