ಯಲಹಂಕ ವಾಯುನೆಲೆಯಲ್ಲಿ ಮತ್ತೊಂದು ಅವಗಢ, ಬಂಡೀಪುರ, ಗೋಪಾಲಸ್ವಾಮಿ ಬೆಟ್ಟದಲ್ಲೂ ಧಗ ಧಗ! 
ರಾಜ್ಯ

ಯಲಹಂಕ ವಾಯುನೆಲೆ ಬಳಿ ಮತ್ತೊಂದು ಅವಗಢ, ಬಂಡೀಪುರ, ಗೋಪಾಲಸ್ವಾಮಿ ಬೆಟ್ಟದಲ್ಲೂ ಧಗ ಧಗ!

ಯಲಹಂಕದ ವಾಯುನೆಲೆ ಬಳಿ ಫೆ.23 ರಂದು ಅಗ್ನಿ ಅನಾಯುತಕ್ಕೆ ಕಾರುಗಳು ಭಸ್ಮವಾಗಿದ್ದ ಘಟನೆ ನಡೆದಿರುವ ಬೆನ್ನಲ್ಲೇ ಮತ್ತೊಂದು ಅಗ್ನಿ ಅವಗಢ ಸಂಭವಿಸಿದೆ.

ಬೆಂಗಳೂರು: ಯಲಹಂಕದ ವಾಯುನೆಲೆ ಬಳಿ ಫೆ.23 ರಂದು ಅಗ್ನಿ ಅನಾಯುತಕ್ಕೆ ಕಾರುಗಳು ಭಸ್ಮವಾಗಿದ್ದ ಘಟನೆ ನಡೆದಿರುವ ಬೆನ್ನಲ್ಲೇ ಮತ್ತೊಂದು ಅಗ್ನಿ ಅವಗಢ ಸಂಭವಿಸಿದೆ. 
ವಾಯುನೆಲೆಯ ಹಿಂಭಾಗದಲ್ಲೇ ಇರುವ ಜಾರಕಬಂಡೆ ಕಾವಲು ಅರಣ್ಯ ಪ್ರದೇಶದಲ್ಲಿ ಬೆಂಕಿ ಹೊತ್ತಿ ಉರಿದಿದೆ. ಸುಮಾರು 40 ಎಕರೆಗೂ ಹೆಚ್ಚಿನ ಪ್ರದೇಶದಲ್ಲಿ ಬೆಂಕಿಯ ಕೆನ್ನಾಲಿಗೆ ವ್ಯಾಪಿಸಿದೆ. 
ಕಿಡಿಗೇಡಿಗಳ ಕೃತ್ಯದಿಂದ ಈ ಅವಗಢ ಸಂಭವಿಸಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದ್ದು ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. 
ಇದೇ ವೇಳೆ ಬಂಡೀಪುರದ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಕಾಳ್ಗಿಚ್ಚು ಕಾಣಿಸಿಕೊಂಡಿದೆ. ನಿನ್ನೆ ರಾತ್ರಿಯೇ ಕಾಣಿಸಿಕೊಂಡಿದ್ದ ಬೆಂಕಿಯನ್ನು ನಂದಿಸಲಾಗಿತ್ತಾದರೂ ಮತ್ತೊಮ್ಮೆ ಬಂಡೀಪುರದ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದೆ. 
ಇನ್ನು ಹಿಮವದ್ ಗೋಪಾಲ ಸ್ವಾಮಿ ಬೆಟ್ಟದಲ್ಲಿಯೂ ಬೆಂಕಿ ಕಾಣಿಸಿಕೊಂಡಿದ್ದು 60 ಅಗ್ನಿ ಶಾಮಕ ಮತ್ತು 50 ಕ್ಕೂ ಹೆಚ್ಚು ಸ್ವಯಂ ಸೇವಕರಿಂದ ಅಗ್ನಿ ನಂದಿಸುವ ಕೆಲಸ ನಡೆಯುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT