ಸಾಂದರ್ಭಿಕ ಚಿತ್ರ 
ರಾಜ್ಯ

ಬಾಂಬಿ ಬಕೆಟ್ ಸಕ್ಸಸ್; ಬಂಡೀಪುರ ಅರಣ್ಯದಲ್ಲಿ ಬೆಂಕಿ ಸಂಪೂರ್ಣ ನಿಯಂತ್ರಣ

ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಕಾಡ್ಗಿಚ್ಚನ್ನು ನಂದಿಸಲು ಭಾರತೀಯ ವಾಯುಪಡೆ, ಅರಣ್ಯ ಇಲಾಖೆ...

ಮೈಸೂರು/ಚಾಮರಾಜನಗರ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಕಾಡ್ಗಿಚ್ಚನ್ನು ನಂದಿಸಲು ಭಾರತೀಯ ವಾಯುಪಡೆ, ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಕಾರ್ಯಕರ್ತರು ಸತತ 5 ದಿನಗಳ ಕಾರ್ಯಾಚರಣೆ ನಡೆಸಿದ ನಂತರ ಯಶಸ್ವಿಯಾಗಿದ್ದು ಇದೀಗ ಬೆಂಕಿ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿದೆ.
ಕಳೆದ ಬುಧವಾರ ಬಂಡೀಪುರ ರಾಷ್ಟ್ರೀಯ ಅರಣ್ಯದಲ್ಲಿ ಬೆಂಕಿ ಹತ್ತಿ ಉರಿದುಕೊಂಡು ನಂತರ ತನ್ನ ಕೆನ್ನಾಲಿಗೆಯನ್ನು ಸುತ್ತಮುತ್ತಲ ಪ್ರದೇಶಗಳಿಗೆ ವ್ಯಾಪಿಸಿತ್ತು. ಅರಣ್ಯ ಇಲಾಖೆ ಸಿಬ್ಬಂದಿ ಸಾಂಪ್ರದಾಯಿಕ ವಿಧಾನಗಳ ಮೂಲಕ ಕಾಡ್ಗಿಚ್ಚನ್ನು ನಂದಿಸಲು ಪ್ರಯತ್ನಿಸಿದರಾದರೂ ಅದು ಹೆಚ್ಚಿನ ಫಲ ಕೊಡಲಿಲ್ಲ. ಕಳೆದ ಎರಡು ದಿನಗಳಲ್ಲಿ ಭಾರತೀಯ ವಾಯುಪಡೆ ನಡೆಸಿದ ಬಂಪಿ ಬಕೆಟ್ ಕಾರ್ಯಾಚರಣೆ ಫಲಶ್ರುತಿ ನೀಡಿದೆ.
ಬಂಪಿ ಬಕೆಟ್ ಕಾರ್ಯಾಚರಣೆಯಲ್ಲಿ ಎರಡು ಹೆಲಿಕಾಪ್ಟರ್ ಗಳ ಮೂಲಕ 19 ಸಾವಿರ ಲೀಟರ್ ನೀರನ್ನು ಹಾಸಲಾಗಿತ್ತು. ಮೈಸೂರಿನಲ್ಲಿ ಹೆಲಿಕಾಪ್ಟರ್ ಸಜ್ಜಾಗಿದ್ದು ಯಾವುದೇ ಕ್ಷಣದಲ್ಲಿ ಬೆಂಕಿ ಕಾಣಿಸಿಕೊಂಡರೆ ಮತ್ತೆ ಅರಣ್ಯಕ್ಕೆ ನೀರು ಹಾಯಿಸುವ ಯೋಜನೆ ವಾಯುಪಡೆಯದ್ದಾಗಿತ್ತು. ಕಳೆದ ಸೋಮವಾರ ಮತ್ತು ಮಂಗಳವಾರ ಸೇರಿ 10 ಕಡೆಗಳಲ್ಲಿ ಸುಮಾರು 30 ಸಾವಿರ ಲೀಟರ್ ನೀರನ್ನು ಹರಿಸಿದ್ದಾರೆ.
ನಿನ್ನೆ ಬೆಳಗ್ಗೆ ಗೋಪಾಲಸ್ವಾಮಿ ಬೆಟ್ಟದ ಮೇಲೆ ಹೆಲಿಕಾಪ್ಟರ್ ಮೂಲಕ ನೀರು ಹಾಯಿಸಲಾಗಿತ್ತು. ಕರಡಿಹಳ್ಳ, ಚಮ್ಮನಹಳ್ಳಿ, ಮೂಲೆಹೊಳೆ ಮತತು ಕೇರಳ ಹಾಗೂ ತಮಿಳು ನಾಡಿನ ಗಡಿ ಭಾಗಗಳಲ್ಲಿ ಹೆಲಿಕಾಪ್ಟರ್ ಗಳಿಂದ ನೀರು ಸಿಂಪಡಿಸಲಾಗಿದೆ. ಗಾಳಿಯಲ್ಲಿ ಸಾಂದ್ರತೆ ಕಡಿಮೆಯಾಗಿದ್ದು ಕೂಡ ಬೆಂಕಿ ನಂದಿಸಲು ವರವಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Demographic manipulation: ಒಳನುಸುಳುವಿಕೆಗಿಂತ ಸಾಮಾಜಿಕ ಸಾಮರಸ್ಯಕ್ಕೆ ಇದೇ 'ದೊಡ್ಡ ಅಪಾಯ'- ಪ್ರಧಾನಿ ಮೋದಿ

RSS Centenary: ಇದೇ ಮೊದಲು; 'ಭಾರತ ಮಾತೆ'ಯ ಚಿತ್ರವುಳ್ಳ 100 ನಾಣ್ಯ ರೂ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ಮೈಸೂರು: ಮುಂದಿನ ವರ್ಷಗಳಲ್ಲೂ ದಸರಾದಲ್ಲಿ ನಾನೇ ಪುಷ್ಪಾರ್ಚನೆ: ಡಿಕೆಶಿ ಕನಸಿಗೆ 'ಕೊಳ್ಳಿ' ಇಟ್ರಾ ಸಿದ್ದರಾಮಯ್ಯ?

DA hike: ಕೇಂದ್ರ ಸರ್ಕಾರಿ ನೌಕರರಿಗೆ 'ದಸರಾ ಗಿಫ್ಟ್' ; ಶೇ. 3 ರಷ್ಟು ತುಟ್ಟಿ ಭತ್ಯೆ ಹೆಚ್ಚಳಕ್ಕೆ ಸಂಪುಟ ಅನುಮೋದನೆ

ತಮಿಳುನಾಡು: ಅರುಣಾಚಲೇಶ್ವರ ದೇವಸ್ಥಾನಕ್ಕೆ ಬಂದಿದ್ದ ಆಂಧ್ರ ಮಹಿಳೆ ಮೇಲೆ ಅತ್ಯಾಚಾರ; ಇಬ್ಬರು ಪೊಲೀಸರ ಬಂಧನ!

SCROLL FOR NEXT