ಹುತಾತ್ಮ ಯೋಧ ಗುರು ಮತ್ತು ಪತ್ನಿ ಕಲಾವತಿ 
ರಾಜ್ಯ

ಪುಲ್ವಾಮಾ ದಾಳಿಗೆ ಕಾರಣರಾದ ಉಗ್ರರನ್ನು ಬಿಡಬೇಡಿ; ಹುತಾತ್ಮ ಯೋಧ ಗುರುವಿನ ಪತ್ನಿ ಕಲಾವತಿ

ಭಾರತೀಯ ವಾಯುಪಡೆ ಜೈಶ್ ಎ ಮೊಹಮ್ಮದ್ ಸಂಘಟನೆಯ ಪಾಕಿಸ್ತಾನದ ಬಲಕೋಟ್ ನಲ್ಲಿರುವ ತಾಣದ...

ಮಂಡ್ಯ: ಭಾರತೀಯ ವಾಯುಪಡೆ ಜೈಶ್ ಎ ಮೊಹಮ್ಮದ್ ಸಂಘಟನೆಯ ಪಾಕಿಸ್ತಾನದ ಬಲಕೋಟ್ ನಲ್ಲಿರುವ ತಾಣದ ಮೇಲೆ ದಾಳಿ ನಡೆಸಿ ನೂರಾರು ಉಗ್ರರನ್ನು ಹೊಡೆದುರುಳಿಸಿದ ಕ್ರಮವನ್ನು ಮಂಡ್ಯ ಜಿಲ್ಲೆಯ ಹುತಾತ್ಮ ಯೋಧ ಗುರುವಿನ ಪತ್ನಿ ಕಲಾವತಿ ಕೊಂಡಾಡಿದ್ದಾರೆ.
ನಿನ್ನೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ತಮ್ಮ ಭಾವನೆಗಳನ್ನು ಹತ್ತಿಕ್ಕಲು ಪ್ರಯತ್ನಿಸಿದರು. ಭಾರತೀಯ ಸೇನಾಪಡೆಗೆ ಸೆಲ್ಯೂಟ್ ಮಾಡುತ್ತಾ, ತಪ್ಪಿತಸ್ಫರನ್ನು ಯಾರನ್ನೂ ಬಿಡಬಾರದು, ಪ್ರತಿಯೊಬ್ಬ ಉಗ್ರನನ್ನೂ ಕೊಂದು ಹಾಕಬೇಕು. ಸೇನೆಗೆ ಬೇಕಾದ ಎಲ್ಲಾ ನೆರವು ನೀಡಬೇಕೆಂದರು.
ಗುರುವಿನ ತಂದೆ ಹೊನ್ನಯ್ಯ ಮಾತನಾಡಿ, ಉಗ್ರರನ್ನು ನಾಶ ಮಾಡಿದರಷ್ಟೇ ತಮ್ಮ ಮಗನ ಆತ್ಮಕ್ಕೆ ಶಾಂತಿ ಸಿಗಲು ಸಾಧ್ಯ. ಪಾಕಿಸ್ತಾನದೊಂದಿಗೆ ಶಾಂತಿ ಮಾತುಕತೆಗೆ ಇದು ಸಮಯವಲ್ಲ, ನಮ್ಮ ಸೈನಿಕರನ್ನು ಕೊಂದವರನ್ನು ಸುಮ್ಮನೆ ಬಿಡಬಾರದು ಎಂದು ಹೇಳಿದರು.
ಗುರು ಹುತಾತ್ಮನಾಗಿ 11 ದಿನಗಳು ಕಳೆದ ಶಾಸ್ತ್ರವಾಗಿ ಕುಟುಂಬಸ್ಥರು ಮೆಲ್ಲಹಳ್ಳಿ ಗ್ರಾಮದಲ್ಲಿ ಸೇರಿ ಕ್ರಿಯೆಗಳನ್ನು ನೆರವೇರಿಸಿದರು. ಹೊನ್ನಯ್ಯ ಮತ್ತು ಗುರುವಿನ ಸೋದರರು ಶಾಸ್ತ್ರ ನೆರವೇರಿಸಿದರು. ಸಾವಿರಕ್ಕೂ ಹೆಚ್ಚು ಜನಕ್ಕೆ ಭೋಜನ ಏರ್ಪಡಿಸಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

SCROLL FOR NEXT