ಹುತಾತ್ಮ ಯೋಧ ಗುರು ಮತ್ತು ಪತ್ನಿ ಕಲಾವತಿ 
ರಾಜ್ಯ

ಪುಲ್ವಾಮಾ ದಾಳಿಗೆ ಕಾರಣರಾದ ಉಗ್ರರನ್ನು ಬಿಡಬೇಡಿ; ಹುತಾತ್ಮ ಯೋಧ ಗುರುವಿನ ಪತ್ನಿ ಕಲಾವತಿ

ಭಾರತೀಯ ವಾಯುಪಡೆ ಜೈಶ್ ಎ ಮೊಹಮ್ಮದ್ ಸಂಘಟನೆಯ ಪಾಕಿಸ್ತಾನದ ಬಲಕೋಟ್ ನಲ್ಲಿರುವ ತಾಣದ...

ಮಂಡ್ಯ: ಭಾರತೀಯ ವಾಯುಪಡೆ ಜೈಶ್ ಎ ಮೊಹಮ್ಮದ್ ಸಂಘಟನೆಯ ಪಾಕಿಸ್ತಾನದ ಬಲಕೋಟ್ ನಲ್ಲಿರುವ ತಾಣದ ಮೇಲೆ ದಾಳಿ ನಡೆಸಿ ನೂರಾರು ಉಗ್ರರನ್ನು ಹೊಡೆದುರುಳಿಸಿದ ಕ್ರಮವನ್ನು ಮಂಡ್ಯ ಜಿಲ್ಲೆಯ ಹುತಾತ್ಮ ಯೋಧ ಗುರುವಿನ ಪತ್ನಿ ಕಲಾವತಿ ಕೊಂಡಾಡಿದ್ದಾರೆ.
ನಿನ್ನೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ತಮ್ಮ ಭಾವನೆಗಳನ್ನು ಹತ್ತಿಕ್ಕಲು ಪ್ರಯತ್ನಿಸಿದರು. ಭಾರತೀಯ ಸೇನಾಪಡೆಗೆ ಸೆಲ್ಯೂಟ್ ಮಾಡುತ್ತಾ, ತಪ್ಪಿತಸ್ಫರನ್ನು ಯಾರನ್ನೂ ಬಿಡಬಾರದು, ಪ್ರತಿಯೊಬ್ಬ ಉಗ್ರನನ್ನೂ ಕೊಂದು ಹಾಕಬೇಕು. ಸೇನೆಗೆ ಬೇಕಾದ ಎಲ್ಲಾ ನೆರವು ನೀಡಬೇಕೆಂದರು.
ಗುರುವಿನ ತಂದೆ ಹೊನ್ನಯ್ಯ ಮಾತನಾಡಿ, ಉಗ್ರರನ್ನು ನಾಶ ಮಾಡಿದರಷ್ಟೇ ತಮ್ಮ ಮಗನ ಆತ್ಮಕ್ಕೆ ಶಾಂತಿ ಸಿಗಲು ಸಾಧ್ಯ. ಪಾಕಿಸ್ತಾನದೊಂದಿಗೆ ಶಾಂತಿ ಮಾತುಕತೆಗೆ ಇದು ಸಮಯವಲ್ಲ, ನಮ್ಮ ಸೈನಿಕರನ್ನು ಕೊಂದವರನ್ನು ಸುಮ್ಮನೆ ಬಿಡಬಾರದು ಎಂದು ಹೇಳಿದರು.
ಗುರು ಹುತಾತ್ಮನಾಗಿ 11 ದಿನಗಳು ಕಳೆದ ಶಾಸ್ತ್ರವಾಗಿ ಕುಟುಂಬಸ್ಥರು ಮೆಲ್ಲಹಳ್ಳಿ ಗ್ರಾಮದಲ್ಲಿ ಸೇರಿ ಕ್ರಿಯೆಗಳನ್ನು ನೆರವೇರಿಸಿದರು. ಹೊನ್ನಯ್ಯ ಮತ್ತು ಗುರುವಿನ ಸೋದರರು ಶಾಸ್ತ್ರ ನೆರವೇರಿಸಿದರು. ಸಾವಿರಕ್ಕೂ ಹೆಚ್ಚು ಜನಕ್ಕೆ ಭೋಜನ ಏರ್ಪಡಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT