ಕರಾಚಿ ಬೇಕರಿ 
ರಾಜ್ಯ

ಬೆಂಗಳೂರು: ಕರಾಚಿ ಬೇಕರಿ ಬೋರ್ಡ್ ಬದಲಿಸುವಂತೆ ಮಾಲೀಕನಿಗೆ ಬೆದರಿಕೆ ಕರೆ

24 ಗಂಟೆಗಳಲ್ಲಿ ಕರಾಚಿ ಬೇಕರಿ ಹೆಸರು ಬದಲಿಸದಿದ್ದರೇ, ಬೇಕರಿಯನ್ನೇ ಧ್ವಂಸಗೊಳಿಸುವುದಾಗಿ ಬೆದರಿಕೆ ಕರೆ ಮಾಡಲಾಗಿದೆ...

ಬೆಂಗಳೂರು: 24 ಗಂಟೆಗಳಲ್ಲಿ ಕರಾಚಿ ಬೇಕರಿ ಹೆಸರು ಬದಲಿಸದಿದ್ದರೇ, ಬೇಕರಿಯನ್ನೇ ಧ್ವಂಸಗೊಳಿಸುವುದಾಗಿ  ಬೆದರಿಕೆ ಕರೆ ಮಾಡಲಾಗಿದೆ.
ಭೂಗತಪಾತಕಿ ವಿಕ್ಕಿಶೆಟ್ಟಿ ಹೆಸರಿನಲ್ಲಿ ಬೇಕರಿ ವ್ಯವಸ್ಥಾಪಕ ಪಿ.ಸುಕುಮಾರ್‌ ಅವರಿಗೆ ಕರೆ ಮಾಡಿರುವ ವ್ಯಕ್ತಿ 24 ಗಂಟೆಯಲ್ಲಿ ಕರಾಚಿ ಬೋರ್ಡ್‌ ತೆಗೆಯದಿದ್ದರೆ ಬೇಕರಿ ಧ್ವಂಸ ಮಾಡಿ ಗುಂಡಿನ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿದ್ದಾನೆ.
ಈ ಬಗ್ಗೆ ಇಂದಿರಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಬೆದರಿಕೆ ಹಾಕಿದ ಧ್ವನಿಯ ಪರೀಕ್ಷೆ ನಡೆಸಲು ಮುಂದಾಗಿದ್ದಾರೆ. 
ಪಿ.ಸುಕುಮಾರ್‌ ಅವರಿಗೆ ಇಂಟರ್‌ನೆಟ್‌ ಕರೆ ಬಂದಿತ್ತು. ಅವರು ಕರೆ ಸ್ವೀಕರಿಸಿದ ನಂತರ, 'ನೀನೇನಾ ಕರಾಚಿ ಬೇಕರಿ ಮಾಲೀಕ ?' ಎಂದು ಜೋರು ಧ್ವನಿಯಲ್ಲಿ ಮಾತನಾಡಿದ ವ್ಯಕ್ತಿ ತನ್ನನ್ನು ಭೂಗತಪಾತಕಿ ವಿಕ್ಕಿ ಶೆಟ್ಟಿ ಎಂದು ಪರಿಚಯಿಸಿಕೊಂಡಿದ್ದ. ಅದಕ್ಕೆ ಉತ್ತರಿಸಿದ ಸುಕುಮಾರ್‌ ನಾನು ಮಾಲೀಕನಲ್ಲ. ಮ್ಯಾನೇಜರ್‌ ಎಂದು ಉತ್ತರಿಸಿದ್ದ. ಏನಾದರೂ ಆಗಿರು ಮೊದಲು ಕರಾಚಿ ಹೆಸರು ಬದಲಾಯಿಸಬೇಕು. ನಿನಗೆ 24 ಗಂಟೆ ಕಾಲಾವಕಾಶ ಕೊಡುತ್ತೇನೆ. ಅಷ್ಟರಲ್ಲಿ ಹೆಸರು ಬದಲಾಯಿಸು, ಇಲ್ಲದಿದ್ದರೆ ಬೇಕರಿ ದ್ವಂಸ ಗೊಳಿಸಿ ಗುಂಡಿನ ದಾಳಿ ನಡೆಯುತ್ತದೆ ಎಂದು ಧಮ್ಕಿ ಹಾಕಿದ್ದಾನೆ.  ಈ ಬಗ್ಗೆ ಇಂದಿರಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಕ್ಕಿ ಶೆಟ್ಟಿಯ ಧ್ವನಿಯನ್ನು ಖಾತ್ರಿಪಡಿಸುವಂತೆ ಕೋರಿ ಇಂದಿರಾನಗರ ಠಾಣೆ ಪೊಲೀಸರು ಸಿಐಡಿ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ವಿಕ್ಕಿ ಶೆಟ್ಟಿಗೆ ಕನ್ನಡ ಚೆನ್ನಾಗಿ ಬರುತ್ತದೆ. ಆದರೆ, ಹಿಂದಿಯಲ್ಲಿ ಬೆದರಿಕೆ ಹಾಕಲಾಗಿದೆ. ಆರೋಪಿ ಇಂಟರ್‌ನೆಟ್‌ ಕರೆ ಮಾಡಿರುವುದು ಸಾಬೀತಾಗಿದೆ ಎಂದು ಪೊಲೀಸರು ತಿಳಿಸಿದ್ದು ತನಿಖೆ ಮುಂದುವರಿದಿದ್ದು ಬೇಕರಿಗೆ ಭದ್ರತೆ ಒದಗಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT