ಚಿನ್ನಾಭರಣ, ಬೈಕ್ ಕಳೆದುಕೊಂಡ ಸಂತ್ರಸ್ತರಿಗೆ ಬೆಂಗಳೂರು ಪೊಲೀಸರಿಂದ ನ್ಯೂ ಇಯರ್ ಗಿಫ್ಟ್! 
ರಾಜ್ಯ

ಚಿನ್ನಾಭರಣ, ಬೈಕ್ ಕಳೆದುಕೊಂಡ ಸಂತ್ರಸ್ತರಿಗೆ ಬೆಂಗಳೂರು ಪೊಲೀಸರಿಂದ ನ್ಯೂ ಇಯರ್ ಗಿಫ್ಟ್!

ಬೈಕ್ ಹಾಗೂ ಚಿನ್ನಾಭರಣ ಕಳೆದುಕೊಂಡಿದ್ದ ಸಂತ್ರಸ್ತ ಜನರಿಗೆ ಹೊಸ ವರ್ಷಾಚರಣೆ ಹಿನ್ನಲೆಯಲ್ಲಿ ನಗರ ಪೊಲೀಸರು ವಿಶೇಷ ಉಡುಗೊರೆಯನ್ನು ನೀಡಿದ್ದಾರೆ. ಈ ಮೂಲಕ ನೂತನ ವರ್ಷವನ್ನು ಸ್ವಾಗತಿಸಿದ್ದಾರೆ...

ಬೆಂಗಳೂರು: ಬೈಕ್ ಹಾಗೂ ಚಿನ್ನಾಭರಣ ಕಳೆದುಕೊಂಡಿದ್ದ ಸಂತ್ರಸ್ತ ಜನರಿಗೆ ಹೊಸ ವರ್ಷಾಚರಣೆ ಹಿನ್ನಲೆಯಲ್ಲಿ ನಗರ ಪೊಲೀಸರು ವಿಶೇಷ ಉಡುಗೊರೆಯನ್ನು ನೀಡಿದ್ದಾರೆ. ಈ ಮೂಲಕ ನೂತನ ವರ್ಷವನ್ನು ಸ್ವಾಗತಿಸಿದ್ದಾರೆ. 
ಚಿನ್ನಾಭರಣ, ಬೈಕ್ ಗಳನ್ನು ಕಳೆದುಕೊಂಡಿದ್ದ ಸಂತ್ರಸ್ತ ಜನರ ಮನೆ ಬಾಗಿಲಿಗೇ ತೆರಳಿರುವ ಪೊಲೀಸರು ಸರ್ ಪ್ರೈಸ್ ಗಿಫ್ಟ್ ಗಳನ್ನು ನೀಡಿದ್ದಾರೆ. 
ರಾತ್ರೋರಾತ್ರಿ ಜನರ ಮನೆ ಬಾಗಿಲಿಗೆ ತೆರಳಿರುವ ಪೊಲೀಸರು ಬಾಗಿಲು ಬಡಿದು, ತೆಗೆಯುಂತೆ ತಿಳಿಸಿದ್ದಾರೆ. ಈ ವೇಳೆ ಗಾಬರಿಯಿಂದ ಮನೆ ಬಾಗಿಲು ತೆಗೆದ ಜನರಿಗೆ ಪೊಲೀಸರು ಶಾಕ್ ನೀಡಿದ್ದಾರೆ. ಬಾಗಿಲು ತೆಗೆದ ಬಳಿಕ ಪೊಲೀಸರು ಹ್ಯಾಪಿ ನ್ಯೂ ಇಯರ್ ಎಂದು ಹೇಳಿ ಅವರು ಕಳೆದುಕೊಂಡಿದ್ದ ವಸ್ತುಗಳನ್ನು ಮರಳಿ ನೀಡಿದ್ದಾರೆ. 
ಕಳ್ಳತನವಾಗಿದ್ದ ಚಿನ್ನವನ್ನು ಪತ್ತೆ ಮಾಡಿ ವಶಪಡಿಸಿಕೊಂಡಿದ್ದ ನಗರ ಪೊಲೀಸರು, ಜನತೆಗೆ ಸರ್ ಪ್ರೈಸ್ ಆಗಿ ನೀಡಬೇಕೆಂಬ ಕಾರಣಕ್ಕೆ ತಮ್ಮ ಬಳಿಯೇ ಇಟ್ಟುಕೊಂಡು ಸುಮ್ಮನಿದ್ದರು. ಇದರಂತೆ ನಿನ್ನೆ ಮಧ್ಯರಾತ್ರಿ ನಗರ ಪೊಲೀಸ್ ಆಯುಕ್ತ ಸುನೀಲ್ ಕುಮಾರ್, ಬೆಂಗಳೂರು ಪಶ್ಚಿಮ ವಲಯದ ಡಿಸಿಪಿ ರವಿ ಚನ್ನಣ್ಣನವರ್, ಡಿಸಿಪಿ ಅಣ್ಣಾಮಲೈ ಸೇರಿದಂತೆ ವಿವಿಧ ಅಧಿಕಾರಿಗಳು ಹಾಗೂ ಸಿಬ್ಬಂದಿ ಚಿನ್ನ ಕಳೆದುಕೊಂಡವರ ಮನೆಗೆ ತೆರಳಿ ಬಂಗಾರವನ್ನು ವಾಪಸ್ ನೀಡಿದ್ದಾರೆ. ಇದರಿಂದ ಹೊಸ ವರ್ಷದ ದಿನದಂದು ಜನತೆ ಸಂತಸ ಪಟ್ಟಿದ್ದಾರೆ. ಕಳೆದು ಹೋದ ವಸ್ತುಗಳನ್ನು ವಾಪಸ್ ನೀಡಿದ್ದಕ್ಕೆ ಪೊಲೀಸರಿಗೆ ಜನತೆ ಕೂಡ ಧನ್ಯವಾದಗಳನ್ನು ಹೇಳಿದ್ದಾರೆ. ಪೊಲೀಸರ ಈ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಪ್ರಶಂಸೆಗಳು ವ್ಯಕ್ತವಾಗತೊಡಗಿವೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT