ಸಾಂದರ್ಭಿಕ ಚಿತ್ರ 
ರಾಜ್ಯ

ನ್ಯೂ ಇಯರ್ ಪಾರ್ಟಿ ಮುಗೀತು, ಪಬ್, ಬಾರ್ ಗಳಲ್ಲಿ ಕಸ ವಿಂಗಡಣೆ ತಪಾಸಣೆಗೆ ಅಧಿಕಾರಿಗಳ ನೇಮಕ

ಹೊಸ ವರ್ಷವನ್ನು ಸಂಭ್ರಮದಿಂದ ಅದ್ದೂರಿಯಾಗಿ ನಗರದ ಜನತೆ ಆಚರಿಸುತ್ತಾರೆ. ಹೊಟೇಲ್, ಪಬ್, ಬಾರ್...

ಬೆಂಗಳೂರು: ಹೊಸ ವರ್ಷವನ್ನು ಸಂಭ್ರಮದಿಂದ ಅದ್ದೂರಿಯಾಗಿ ನಗರದ ಜನತೆ ಆಚರಿಸುತ್ತಾರೆ. ಹೊಟೇಲ್, ಪಬ್, ಬಾರ್ ಗಳಲ್ಲಿ ಪಾರ್ಟಿ ನಡೆಸಿ ತ್ಯಾಜ್ಯಗಳನ್ನು ಎಸೆಯುತ್ತಾರೆ. ಆದರೆ ಈ ವರ್ಷ ತ್ಯಾಜ್ಯಗಳನ್ನು ಪಬ್, ಬಾರ್ ಗಳಲ್ಲಿ ಸಿಕ್ಕಿದಲ್ಲಿ ಎಸೆಯುವಂತಿಲ್ಲ. ಬೇಕಾಬಿಟ್ಟಿಯಾಗಿ ಕಸಗಳನ್ನು, ಮದ್ಯದ ಬಾಟಲಿಗಳನ್ನು ಎಸೆದರೆ ಮಹಾನಗರ ಪಾಲಿಕೆ ಭಾರೀ ದಂಡ ಹಾಕುತ್ತದೆ. ಇದಕ್ಕಾಗಿ ತಪಾಸಣೆಗೆ ಅಧಿಕಾರಿಗಳನ್ನು ನಿಯೋಜಿಸಿದೆ.

ಹಳೆಯ ತಪ್ಪುಗಳಿಂದ ಬುದ್ದಿ ಕಲಿತಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಎಂ ಜಿ ರಸ್ತೆ, ಶಿವಾಜಿನಗರ, ಬ್ರಿಗೇಡ್ ರಸ್ತೆ, ಆರ್ ಟಿ ನಗರ, ಕೋರಮಂಗಲ, ಇಂದಿರಾನಗರ ಮತ್ತು ದೊಮ್ಮಲೂರುಗಳಲ್ಲಿ ಪಬ್ ಮತ್ತು ರೆಸ್ಟೋರೆಂಟ್ ಗಳಲ್ಲಿ ತಪಾಸಣೆ ನಡೆಸಲು ಅಧಿಕಾರಿಗಳನ್ನು ನಿಯೋಜಿಸಿದೆ. ಇಂದು ತ್ಯಾಜ್ಯಗಳನ್ನು ವಿಂಗಡಣೆ ಮಾಡುವಂತೆ ಸೂಚಿಸಿದೆ. ಇಂದು ಮತ್ತು ನಾಳೆ ಅಧಿಕಾರಿಗಳು ಭೇಟಿ ನೀಡಿ ತಪಾಸಣೆ ನಡೆಸಿ ಹೊಟೇಲ್, ಪಬ್, ರೆಸ್ಟೋರೆಂಟ್ ಮಾಲೀಕರಿಗೆ ಅರಿವು ಮೂಡಿಸಲಿದ್ದಾರೆ.

ಬಿಬಿಎಂಪಿ ಕೋರಮಂಗಲ ಸೇರಿದಂತೆ ಪ್ರಮುಖ ಜನನಿಬಿಡ ಪ್ರದೇಶಗಳಲ್ಲಿ ಸುಮಾರು 50 ಮಾರ್ಷಲ್ ಗಳನ್ನು ನಿಯೋಜಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಉಗುಳದಂತೆ ಮತ್ತು ಆಲ್ಕೋಹಾಲ್ ಬಾಟಲ್ ಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಎಸೆಯದಂತೆ ಅರಿವು ಮೂಡಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT