ಮಧೋಳದಲ್ಲಿ ಉತ್ತರ ಕರ್ನಾಟಕ ಧ್ವಜಾರೋಹಣ 
ರಾಜ್ಯ

ಮತ್ತೆ ಪ್ರತ್ಯೇಕ ರಾಜ್ಯದ ಕೂಗು: ಮಧೋಳದಲ್ಲಿ ಉತ್ತರ ಕರ್ನಾಟಕ ಧ್ವಜಾರೋಹಣ

ಬಹು ದಿನಗಳಿಂದ ತಣ್ಣಗಾಗಿದ್ದ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗು ಮತ್ತೆ ಕೇಳಿಬಂದಿದೆ. ಬಾಗಲಕೋಟೆ ಜಿಲ್ಲೆ ಮುಧೋಳ ನಗರದಲ್ಲಿರುವ ಉತ್ತರ ಕರ್ನಾಟಕ ಹೋರಾಟ ಸಮಿತಿ....

ಮಧೋಳ: ಬಹು ದಿನಗಳಿಂದ ತಣ್ಣಗಾಗಿದ್ದ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗು ಮತ್ತೆ ಕೇಳಿಬಂದಿದೆ. ಬಾಗಲಕೋಟೆ ಜಿಲ್ಲೆ ಮುಧೋಳ ನಗರದಲ್ಲಿರುವ ಉತ್ತರ ಕರ್ನಾಟಕ ಹೋರಾಟ ಸಮಿತಿ ಉಪಕಚೇರಿ ಆವರಣದಲ್ಲಿ ಉತ್ತರ ಕರ್ನಾಟಕ ಪ್ರತ್ಯೇಕ ಧ್ವಜಾರೋಹಣ ನಡೆಸಿದೆ.
ಮಧೋಳದಲ್ಲಿನ ಹೋರಾಟಗಾರರು ಪ್ರತ್ಯೇಕ ರಾಜ್ಯಕ್ಕಾಗಿ ಕನ್ನಡ ಧ್ವಜ ಬಿಟ್ಟು ಬೇರೆ ಧ್ವಜ ನಿರ್ಮಿಸಿ ಧ್ವಜಾರೋಹಣ ಮಾಡಿದ್ದಾರೆ. ಮಂಗಳವಾರ ಬೆಳಿಗ್ಗೆ ಈ ಕಾರ್ಯಕ್ರಮ ನಡೆದಿದೆ.
ಕಳೆದ ಸಪ್ಟೆಂಬರ್ 23ರಂದು ಬಾಗಲಕೋಟೆಯಲ್ಲಿ ಸಭೆ ಸೇರಿದ್ದ ಹೋರಾಟ ಸಮಿತಿ ಸದಸ್ಯರು  ಜನವರಿ 1ರಂದುಪ್ರತ್ಯೇಕ ಧ್ವಜಾರೋಹಣ ಮಾಡಬೇಕೆಂದು ನಿರ್ಣಯ ತೆಗೆದುಕೊಂಡಿದ್ದು ಆ ನಿರ್ಣಯವನ್ನು ಇಂದು ಜಾರಿಗೊಳಿಸಲಾಗಿದೆ./ಉತ್ತರ ಕರ್ನಾಟಕ ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ನಾಗೇಶ್ ಗೋಲಶೆಟ್ಟಿ ಸೇರಿ ಅನೇಕರು ಈ ಸಮಯದಲ್ಲಿ ಹಾಜರಿದ್ದರು.
ಕೇಸರಿ, ಹಳದಿ, ಹಸಿರು ಬಣ್ಣಗಳ ನಡುವೆ ರಾಜ್ಯದ 13 ಜಿಲೆಗಳಿರುವ ಚಿತ್ರವನ್ನು ನೀಲಿ ಬಣ್ಣದಲ್ಲಿ ರಚಿಸಲಾಗಿದೆ
ಇದೇ ವೇಳೆ ಕನ್ನಡ ಪರ ಸಂಘಟೆನೆಗಳು ಉತ್ತರ ಕರ್ನಾಟಕ ಪ್ರತ್ಯೇಕ ಧ್ವಜಾರೋಹಣಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದೆ.ಈ ಸಂಬಂಧ ಪ್ರತಿಭಟನೆ ನಡೆಸುವುದಾಗಿಯೂ ಅವುಗಳು ಎಚ್ಚರಿಕೆ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT