ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಹೊರಬರುತ್ತಿರುವ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಹಾಗೂ ಇತರರು 
ರಾಜ್ಯ

ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ವ್ಯತ್ಯಯ ಸುದ್ದಿ; ಗಣ್ಯರು, ಭಕ್ತರು ಮಠಕ್ಕೆ ದೌಡು

'ನಡೆದಾಡುವ ದೇವರು' ಸಿದ್ದಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಅವರ ಆರೋಗ್ಯದಲ್ಲಿ ...

ತುಮಕೂರು: 'ನಡೆದಾಡುವ ದೇವರು' ಸಿದ್ದಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಅವರ ಆರೋಗ್ಯದಲ್ಲಿ ವ್ಯತ್ಯಯವುಂಟಾಗಿದೆ ಎಂದು ಸುದ್ದಿ ಕಾಡ್ಗಿಚ್ಚಿನಂತೆ ಹಬ್ಬಿದ್ದರಿಂದ ನೂರಾರು ಸಂಖ್ಯೆಯಲ್ಲಿ ಗಣ್ಯ ವ್ಯಕ್ತಿಗಳು ಮತ್ತು ಭಕ್ತರು ಸಿದ್ದಗಂಗಾ ಮಠಕ್ಕೆ ಆಗಮಿಸುತ್ತಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಸಹ ನಿನ್ನೆ ಮಠಕ್ಕೆ ಆಗಮಿಸಿ ಶ್ರೀಗಳ ಆರೋಗ್ಯ ವಿಚಾರಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಾಮೀಜಿಗಳು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ನನ್ನನ್ನು ಕಂಡಾಗ ಗುರುತು ಹಿಡಿದು ಮಠದಲ್ಲಿ ಪ್ರಸಾದ ಸ್ವೀಕರಿಸುವಂತೆ ಹೇಳಿದರು ಎಂದು ತಿಳಿಸಿದರು.

ಯಡಿಯೂರಪ್ಪನವರು ಶ್ರೀಗಳನ್ನು ಭೇಟಿ ಮಾಡಿದ್ದಾರೆ ಎಂಬ ಸುದ್ದಿ ಬಂದ ಕೂಡಲೇ ಭಕ್ತಾದಿಗಳಲ್ಲಿ ಆತಂಕ, ದುಗುಡ ಮನೆಮಾಡಿತು. ಅಪಾರ ಸಂಖ್ಯೆಯಲ್ಲಿ ಮಠದತ್ತ ಬರಲು ಆರಂಭಿಸಿದರು. ಅವರನ್ನು ನಿಯಂತ್ರಿಸುವುದು ಪೊಲೀಸರಿಗೆ ಕಷ್ಟವಾಯಿತು. ನಂತರ ಸೂಕ್ತ ಬ್ಯಾರಿಕೇಡ್ ಗಳನ್ನು ಹಾಕಿ ಪೊಲೀಸರು ನಿಯಂತ್ರಿಸಿದರು.

ಸದ್ಯ ಶ್ರೀಗಳ ಆರೋಗ್ಯ ಸ್ಥಿರವಾಗಿದ್ದು, ವೈದ್ಯರು ದಿನಪೂರ್ತಿ ಅವರ ತಪಾಸಣೆ ಮತ್ತು ಮೇಲ್ವಿಚಾರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

ಇನ್ನೊಂದೆಡೆ ನಿನ್ನೆ ಮಠದ ಕಿರಿಯ ಶ್ರೀಗಳು ಹೇಳಿಕೆ ನೀಡಿ, ಸಿದ್ದಗಂಗಾ ಶ್ರೀಗಳು ಪಿತ್ತಕೋಶ ಮತ್ತು ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದು ಮಠದಲ್ಲೇ ಚಿಕಿತ್ಸೆನೀಡಲಾಗುತ್ತದೆ. ಭಕ್ತರು ಹೆದರುವ ಅಗತ್ಯ ಇಲ್ಲ. ಶ್ರೀಗಳು ಆರೋಗ್ಯವಾಗಿದ್ದಾರೆ. ರೇಲಾ ಆಸ್ಪತ್ರೆ ವೈದ್ಯರ ಮಾರ್ಗದರ್ಶನದಿಂದ ಚಿಕಿತ್ಸೆ ನೀಡಲಾಗುತ್ತಿದೆ. ಯಾರೂ ಧೃತಿಗೆಡುವ ಅಗತ್ಯವಿಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT