ಎಂಬಿ ಪಾಟೀಲ್ 
ರಾಜ್ಯ

ಗೌರಿ, ಕಲ್ಬುರ್ಗಿ ಹತ್ಯೆ ಪ್ರಕರಣಕ್ಕೆ ಶೀಘ್ರವೇ ತಾರ್ಕಿಕ ಅಂತ್ಯ: ಎಂಬಿ ಪಾಟೀಲ್

ಪತ್ರಕರ್ತೆ ಗೌರಿ ಲಂಕೇಶ್ ಹಾಗೂ ಸಾಹಿತಿ ಎಂಎಂ ಕಲ್ಬುರ್ಗಿ ಅವರ ಹತ್ಯೆ ಪ್ರಕರಣಕ್ಕೆ ಶೀಘ್ರವೇ ತಾರ್ಕಿಕ ಅಂತ್ಯ ಸಿಗಲಿದೆ ಎಂದು ಗೃಹ ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ.

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹಾಗೂ ಸಾಹಿತಿ ಎಂಎಂ ಕಲ್ಬುರ್ಗಿ ಅವರ ಹತ್ಯೆ ಪ್ರಕರಣಕ್ಕೆ ಶೀಘ್ರವೇ ತಾರ್ಕಿಕ ಅಂತ್ಯ ಸಿಗಲಿದೆ ಎಂದು ಗೃಹ ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ.
ವಿಧಾನಸೌಧದ ದಲ್ಲಿ ಉನ್ನತ ಮಟ್ಟದ ಪೋಲೀಸ್ ಅಧಿಕಾರಿಗಳ ಸಭೆಯಲ್ಲಿ ಇಲಾಖೆಯಲ್ಲಿನ ಸಮಸ್ಯೆಗಳು, ಕಾನೂನು ಸುವ್ಯವಸ್ಥೆ ಬಗ್ಗೆ ಮಾಹಿತಿ ಪಡೆದ ಬಳಿಕ ಮಾದ್ಯಮದವರೊಡನೆ ಮಾತನಾಡಿದ ಸಚಿವ ಪಾಟೀಲ್ "ಗೌರಿ, ಕಲ್ಬುರ್ಗಿ ಹತ್ಯೆಯ ಕುರಿತು ತನಿಖೆಗಳು ನಡೆದಿದೆ. ಎರಡೂ ಪ್ರಕರಣಗಳಿಗೆ ಶೀಘ್ರವೇ ತಾರ್ಕಿಕ ಅಂತ್ಯ ದೊರಕುತ್ತದೆ. ಅಧಿಕಾರಿಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು.
ರಾಜ್ಯದಲ್ಲಿ 113 ಜನ ಅಕ್ರಮ ವಲಸಿಗರನ್ನು ಈಗಾಗಲೇ ಗುರುತಿಸಲಾಗಿದ್ದು ಇಂತಹವರ ಬಗ್ಗೆ ನಿಗಾ ವಹಿಸಲುಸೂಚಿಸಿದ್ದೇನೆ,ಅಪರಾಧಿ ಯಾವ ಜಾತಿ, ಧರ್ಮ ಎಂದು ಪರಿಗಣಿಸುವುದು ತಪ್ಪು, ಯಾವುದೇ ವ್ಯಕ್ತಿಯಾದರೂ ಅಪರಾಧಿಯಾಗಿದ್ದರೆ ಶಿಕ್ಷೆ ಆಗಲೇಬೇಕು ಎಂಬುದಾಗಿ ಅಭಿಪ್ರಾಯಪಟ್ಟರು.
ಅಪರಾಧಗಳ ನಿಯಂತ್ರಣ, ಮಾದಕ ವಸ್ತುಗಳ ಮಾರಾಟ ಜಾಲ ಪತ್ತೆ, ನಗರದಲ್ಲಿ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಸಂಬಂಧಿಸಿ ಕ್ರಮ ತೆಗೆದುಕೊಳ್ಳಲು ಅಧಿಕಾರಿಗಳಿಗೆ ತಿಳಿಸಿದ್ದಾಗಿಯೂ ಸಚಿವರು ಮಾದ್ಯಮ ಮಿತ್ರರಿಗೆ ವಿವರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್