ಎಂಬಿ ಪಾಟೀಲ್ 
ರಾಜ್ಯ

ಗೌರಿ, ಕಲ್ಬುರ್ಗಿ ಹತ್ಯೆ ಪ್ರಕರಣಕ್ಕೆ ಶೀಘ್ರವೇ ತಾರ್ಕಿಕ ಅಂತ್ಯ: ಎಂಬಿ ಪಾಟೀಲ್

ಪತ್ರಕರ್ತೆ ಗೌರಿ ಲಂಕೇಶ್ ಹಾಗೂ ಸಾಹಿತಿ ಎಂಎಂ ಕಲ್ಬುರ್ಗಿ ಅವರ ಹತ್ಯೆ ಪ್ರಕರಣಕ್ಕೆ ಶೀಘ್ರವೇ ತಾರ್ಕಿಕ ಅಂತ್ಯ ಸಿಗಲಿದೆ ಎಂದು ಗೃಹ ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ.

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹಾಗೂ ಸಾಹಿತಿ ಎಂಎಂ ಕಲ್ಬುರ್ಗಿ ಅವರ ಹತ್ಯೆ ಪ್ರಕರಣಕ್ಕೆ ಶೀಘ್ರವೇ ತಾರ್ಕಿಕ ಅಂತ್ಯ ಸಿಗಲಿದೆ ಎಂದು ಗೃಹ ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ.
ವಿಧಾನಸೌಧದ ದಲ್ಲಿ ಉನ್ನತ ಮಟ್ಟದ ಪೋಲೀಸ್ ಅಧಿಕಾರಿಗಳ ಸಭೆಯಲ್ಲಿ ಇಲಾಖೆಯಲ್ಲಿನ ಸಮಸ್ಯೆಗಳು, ಕಾನೂನು ಸುವ್ಯವಸ್ಥೆ ಬಗ್ಗೆ ಮಾಹಿತಿ ಪಡೆದ ಬಳಿಕ ಮಾದ್ಯಮದವರೊಡನೆ ಮಾತನಾಡಿದ ಸಚಿವ ಪಾಟೀಲ್ "ಗೌರಿ, ಕಲ್ಬುರ್ಗಿ ಹತ್ಯೆಯ ಕುರಿತು ತನಿಖೆಗಳು ನಡೆದಿದೆ. ಎರಡೂ ಪ್ರಕರಣಗಳಿಗೆ ಶೀಘ್ರವೇ ತಾರ್ಕಿಕ ಅಂತ್ಯ ದೊರಕುತ್ತದೆ. ಅಧಿಕಾರಿಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು.
ರಾಜ್ಯದಲ್ಲಿ 113 ಜನ ಅಕ್ರಮ ವಲಸಿಗರನ್ನು ಈಗಾಗಲೇ ಗುರುತಿಸಲಾಗಿದ್ದು ಇಂತಹವರ ಬಗ್ಗೆ ನಿಗಾ ವಹಿಸಲುಸೂಚಿಸಿದ್ದೇನೆ,ಅಪರಾಧಿ ಯಾವ ಜಾತಿ, ಧರ್ಮ ಎಂದು ಪರಿಗಣಿಸುವುದು ತಪ್ಪು, ಯಾವುದೇ ವ್ಯಕ್ತಿಯಾದರೂ ಅಪರಾಧಿಯಾಗಿದ್ದರೆ ಶಿಕ್ಷೆ ಆಗಲೇಬೇಕು ಎಂಬುದಾಗಿ ಅಭಿಪ್ರಾಯಪಟ್ಟರು.
ಅಪರಾಧಗಳ ನಿಯಂತ್ರಣ, ಮಾದಕ ವಸ್ತುಗಳ ಮಾರಾಟ ಜಾಲ ಪತ್ತೆ, ನಗರದಲ್ಲಿ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಸಂಬಂಧಿಸಿ ಕ್ರಮ ತೆಗೆದುಕೊಳ್ಳಲು ಅಧಿಕಾರಿಗಳಿಗೆ ತಿಳಿಸಿದ್ದಾಗಿಯೂ ಸಚಿವರು ಮಾದ್ಯಮ ಮಿತ್ರರಿಗೆ ವಿವರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಕ್ಕಳ ಸಾವಿಗೆ ಪ್ರತೀಕಾರ: ಇಸ್ರೇಲ್-ಅಮೆರಿಕ, ಗಲ್ಫ್ ದೇಶಗಳ ಮೇಲೆ ದಾಳಿ ನಿಲ್ಲಲ್ಲ; ಇರಾನ್ ಹೊಸ ಸರ್ವೋಚ್ಛ ನಾಯಕ ವಾರ್ನಿಂಗ್!

No shortage of fuel: ಹಾರ್ಮುಜ್ ಜಲಸಂಧಿ ತಲುಪಿಸಬಹುದಾದ ತೈಲಕ್ಕಿಂತ ಹೆಚ್ಚಿನದ್ದು ಬೇರೆಡೆಯಿಂದ ಭಾರತ ತಲುಪಿದೆ; ಪೆಟ್ರೋಲಿಯಂ ಸಚಿವ

ಮಧ್ಯಪ್ರಾಚ್ಯ ಯುದ್ಧಗ್ರಸ್ತ: ತೈಲ, ಅನಿಲ ಪೂರೈಕೆ ವ್ಯತ್ಯಯ ಸಂಕಷ್ಟ; ಆದರೂ ರಹಸ್ಯ'ಭೂಗತ ಗುಹೆ'ಗಳಿಂದ ಭಾರತಕ್ಕೆ No Tension!

ನಮ್ಮ ಶಕ್ತಿ ಇರಾನ್ ನಿರ್ನಾಮಕ್ಕೆ ಮೀಸಲು, ಹಾರ್ಮುಜ್ ಜಲಸಂಧಿಯಲ್ಲಿ ಟ್ಯಾಂಕರ್ ಗಳಿಗೆ ಬೆಂಗಾವಲು ನೀಡಲ್ಲ: ಅಮೆರಿಕ

ಮಾರ್ಚ್ 16 ರಂದು ರಾಜ್ಯದ ಎರಡು ಕ್ಷೇತ್ರಗಳ ಉಪ ಚುನಾವಣೆ ಸೇರಿದಂತೆ ಐದು ರಾಜ್ಯಗಳ ಚುನಾವಣೆ ಘೋಷಣೆ ಸಾಧ್ಯತೆ

SCROLL FOR NEXT