ಸಾಂದರ್ಭಿಕ ಚಿತ್ರ 
ರಾಜ್ಯ

ನೆಲಮಂಗಲ ಸಮೀಪ ಎನ್ಎಚ್-4ರಲ್ಲಿ ಅಪಘಾತ; ಇಬ್ಬರು ಸಾವು

ನಿಲುಗಡೆಯಾಗಿದ್ದ ಟ್ರಕ್ ಗೆ ಕಾರುಗಳು ಡಿಕ್ಕಿ ಹೊಡೆದ ಪರಿಣಾ ಮ ಎರಡು ಪ್ರತ್ಯೇಕ ಅಪಘಾತಗಳಲ್ಲಿ ...

ಬೆಂಗಳೂರು: ನಿಲುಗಡೆಯಾಗಿದ್ದ ಟ್ರಕ್ ಗೆ ಕಾರುಗಳು ಡಿಕ್ಕಿ ಹೊಡೆದ ಪರಿಣಾ ಮ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ನೆಲಮಂಗಲ ಸಮೀಪ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ನಿನ್ನೆ ಮುಂಜಾನೆ ನಡೆದಿದೆ.

ಟಿ ಬೇಗೂರು ಸಮೀಪ ತಿಪ್ಪಗೊಂಡನಹಳ್ಳಿಯಲ್ಲಿ ನಿಂತಿದ್ದ ಟ್ರಕ್ ಗೆ ವೇಗವಾಗಿ ಬಂದ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದು ಖಾಸಗಿ ಕಂಪೆನಿ ನೌಕರ ಮನೋಜ್ ಮೃತಪಟ್ಟಿದ್ದು ಆತನ ನಾಲ್ವರು ಸ್ನೇಹಿತರು ಗಂಭೀರವಾಗಿ ಗಾಯಗೊಂಡಿದ್ದಾರೆ. ಟ್ರಕ್ ಚಾಲಕ ಗಾಡಿಯನ್ನು ನಿಲ್ಲಿಸಿ ಪಕ್ಕದ ಡಾಬಾಕ್ಕೆ ತೆರಳಿದ್ದರು. ಲಿಂಗರಾಜಪುರ ನಿವಾಸಿಯಾಗಿರುವ ಮನೋಜ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಗಾಯಗೊಂಡ ಭರತ್, ಸಾಗರ್, ಸುನೀಲ್ ಮತ್ತು ಕಿರಣ್ ಹೆಣ್ಣೂರು ಮತ್ತು ಕಸ್ತೂರಿನಗರ ನಿವಾಸಿಗಳಾಗಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಿನ್ನೆ ನಸುಕಿನ ಜಾವ 4.30ರ ವೇಳೆಗೆ ಇವರೆಲ್ಲರೂ ಹೊಸ ವರ್ಷದ ಪಾರ್ಟಿ ಮುಗಿಸಿಕೊಂಡು ಬೆಂಗಳೂರಿಗೆ ವಾಪಸಾಗುತ್ತಿದ್ದರು. ಕಾರನ್ನು ಚಲಾಯಿಸುತ್ತಿದ್ದ ಭರತ್ ಗೆ ನಿಂತಿದ್ದ ಟ್ರಕ್ ಕಾಣಿಸಿರಲಿಲ್ಲ.

ಮತ್ತೊಂದು ಘಟನೆಯಲ್ಲಿ 44 ವರ್ಷದ ಆನಂದ್ ಎಂಬುವವರು ಜೆನ್ ಕಾರನ್ನು ವೇಗವಾಗಿ ಚಲಾಯಿಸಿ ಕುಣಿಗಲ್ ಸಮೀಪ ನಿಂತಿದ್ದ ಟ್ರಕ್ ಗೆ ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ. ನೆಲಮಂಗಲದ ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಆನಂದ್ ಕೆಲಸ ಮಾಡುತ್ತಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT