ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ವಕೀಲೆ ಆತ್ಮಹತ್ಯೆ, ಏಳು ಮಂದಿ ವಿರುದ್ಧ ಕೇಸು ದಾಖಲು

ಸ್ಥಳೀಯ ಕಾರ್ಪೊರೇಟರ್ ಮತ್ತು ನೆರೆಮನೆಯವರ ಕಿರುಕುಳ ತಾಳಲಾರದೆ ಯುವ ವಕೀಲೆಯೊಬ್ಬರು ...

ಬೆಂಗಳೂರು: ಸ್ಥಳೀಯ ಕಾರ್ಪೊರೇಟರ್ ಮತ್ತು ನೆರೆಮನೆಯವರ ಕಿರುಕುಳ ತಾಳಲಾರದೆ ಯುವ ವಕೀಲೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ಕಳೆದ ಸೋಮವಾರ ಸಂಜೆ ಈ ಘಟನೆ ನಡೆದಿದ್ದು ನಿನ್ನೆ ಬೆಳಕಿಗೆ ಬಂದಿದೆ.

ಮೃತ ವಕೀಲೆಯನ್ನು ಧರಣಿ ಎಂದು ಗುರುತಿಸಲಾಗಿದೆ. ಈಕೆ ಮಹದೇವಪುರ ಬಳಿ ನಾರಾಯಣಪರದಲ್ಲಿ ತಾಯಿ ಜೊತೆ ನೆಲೆಸಿದ್ದರು. ಆಕೆಯ ಮನೆ ಮುಂದಿನ ಜಾಗವೊಂದಕ್ಕೆ ಸಂಬಂಧಿಸಿದಂತೆ ಕಾರ್ಪೊರೇಟರ್ ಸುರೇಶ್ ಮತ್ತು ನೆರೆಮನೆಯವರು ಕಿರುಕುಳ ನೀಡುತ್ತಿದ್ದು ಅದನ್ನು ತಾಳಲಾರದೆ ಈ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಕಳೆದ ವರ್ಷ ಸೆಪ್ಟೆಂಬರ್ 9ರಂದು ಕಿರುಕುಳಕ್ಕೆ ಸಂಬಂಧಪಟ್ಟಂತೆ ಧರಣಿ ತಾಯಿ ಪೊಲೀಸರಿಗೆ ದೂರು ಸಹ ನೀಡಿದ್ದರು, ಆದರೂ ಕೂಡ ಕಿರುಕುಳ ಮುಂದುವರಿದಿತ್ತು.
ಪ್ರಕರಣ ಸಂಬಂಧ ಕಾರ್ಪೊರೇಟರ್ ಸೇರಿದಂತೆ ಏಳು ಮಂದಿ ವಿರುದ್ಧ ಕೇಸು ದಾಖಲಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT