ಸಂಗ್ರಹ ಚಿತ್ರ 
ರಾಜ್ಯ

ರಾಷ್ಟ್ರೀಯ ಅನುಮತಿ ಪಡೆದಿರುವ ಎಲ್ಲಾ ವಾಣಿಜ್ಯ ವಾಹನಗಳಲ್ಲಿ ಜಿಪಿಎಸ್ ಕಡ್ಡಾಯ: ಸಾರಿಗೆ ಸಚಿವ ತಮ್ಮಣ್ಣ

ಕೇಂದ್ರ ಸರ್ಕಾರದ ನಿರ್ದೇಶನದಂತೆ ವಾಹನಗಳಲ್ಲಿ ಜಿಪಿಎಸ್ ಹಾಗೂ ತುರ್ತು ಗಾಬರಿ ಗುಂಡಿ ಅಳವಡಿಕೆ ವ್ಯವಸ್ಥೆಯನ್ನು ಜಾರಿಗೆ ತಂದಿರುವ ಸರ್ಕಾರ, ಮುಂಬರುವ ದಿನಗಳಲ್ಲಿ ಎಲ್ಲಾ ವಾಣಿಜ್ಯ ಪ್ರಯಾಣಿಕ ವಾಹನಗಳು ಹಾಗೂ ರಾಷ್ಟ್ರೀಯ ಅನುಮತಿ ಪಡೆದಿರುವ...

ಬೆಂಗಳೂರು: ಕೇಂದ್ರ ಸರ್ಕಾರದ ನಿರ್ದೇಶನದಂತೆ ವಾಹನಗಳಲ್ಲಿ ಜಿಪಿಎಸ್ ಹಾಗೂ ತುರ್ತು ಗಾಬರಿ ಗುಂಡಿ ಅಳವಡಿಕೆ ವ್ಯವಸ್ಥೆಯನ್ನು ಜಾರಿಗೆ ತಂದಿರುವ ಸರ್ಕಾರ, ಮುಂಬರುವ ದಿನಗಳಲ್ಲಿ ಎಲ್ಲಾ ವಾಣಿಜ್ಯ ಪ್ರಯಾಣಿಕ ವಾಹನಗಳು ಹಾಗೂ ರಾಷ್ಟ್ರೀಯ ಅನುಮತಿ ಪಡೆದಿರುವ ವಾಣಿಜ್ಯ ವಾಹನಗಳಲ್ಲೂ ಈ ವ್ಯವಸ್ಥೆಯನ್ನು ಕಡ್ಡಾಯ ಮಾಡಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ. 
ಯಶವಂತಪುರ ಪ್ರಾದೇಶಿಕ ಸಾರಿಗೆ ಇಲಾಖೆ ಕಚೇರಿ ಆವರಣದಲ್ಲಿ ಸಾರ್ವಜನಿಕ ಪ್ರಯಾಣಿಕ ವಾಹನಗಳಲ್ಲಿ ಜಿಪಿಎಸ್ ಹಾಗೂ ತುರ್ತು ಗಾಬರಿ ಗುಂಡಿ ಅಳವಡಿಕೆ ವ್ಯವಸ್ಥೆಗೆ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಅವರು ಚಾಲನೆ ನೀಡಿದರು. ರಸ್ತೆ ಹಾಗೂ ಹೆದ್ದಾರಿ ಸಾರಿಗೆ ಸಚಿವಾಲಯವು ಜ.1 ರಿಂದ ಅನುಮತಿ ಪಡೆಯುವ ಎಲ್ಲಾ ವಾಹನಗಳಲ್ಲೂ ಜಿಪಿಎಸ್ ಹಾಗೂ ತುರ್ತು ಗಾಬರಿ ಗುಂಡಿಗಳನ್ನು ಅಳಡವಿಸುವಂತೆ ಕಡ್ಡಾಯ ಮಾಡಿದೆ. ಇದೀಗ ಈ ಬಗ್ಗೆ ರಾಜ್ಯ ಸರ್ಕಾರಗಳು ನಿರ್ಧಾರ ಕೈಗೊಳ್ಳಬೇಕಿದೆ ಎಂದು ಹೇಳಿದ್ದಾರೆ. 
ಪ್ರಯಾಣಿಕರ ಸುರಕ್ಷತಾ ದೃಷ್ಟಿಯಿಂದ ಇದೊಂದು ಉತ್ತಮವಾದ ಕಾರ್ಯಕ್ರಮವಾಗಿದೆ. ಹೀಗಾಗಿ ನಾವೂ ಕೂಡ ರಾಜ್ಯದಲ್ಲಿ ಈ ನಿಯಮವನ್ನು ಜಾರಿಗೆ ತರಲು ನಿರ್ಧರಿಸಿದ್ದೇವೆ. ಪ್ರಸ್ತುತ ಈ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಶೀಘ್ರದಲ್ಲಿಯೇ ಆದೇಶ ಹೊರಡಿಸಲಾಗುತ್ತದೆ. ವಾಹನಗಳಿಗೆ ವ್ಯವಸ್ಥೆಗಳನ್ನು ಅಳವಡಿಸಲು ಗಡುವುಗಳನ್ನೂ ನೀಡಲಾಗುತ್ತೆದ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT