ಬೆಂಗಳೂರು: ಕೇಂದ್ರ ಸರ್ಕಾರದ ನಿರ್ದೇಶನದಂತೆ ವಾಹನಗಳಲ್ಲಿ ಜಿಪಿಎಸ್ ಹಾಗೂ ತುರ್ತು ಗಾಬರಿ ಗುಂಡಿ ಅಳವಡಿಕೆ ವ್ಯವಸ್ಥೆಯನ್ನು ಜಾರಿಗೆ ತಂದಿರುವ ಸರ್ಕಾರ, ಮುಂಬರುವ ದಿನಗಳಲ್ಲಿ ಎಲ್ಲಾ ವಾಣಿಜ್ಯ ಪ್ರಯಾಣಿಕ ವಾಹನಗಳು ಹಾಗೂ ರಾಷ್ಟ್ರೀಯ ಅನುಮತಿ ಪಡೆದಿರುವ ವಾಣಿಜ್ಯ ವಾಹನಗಳಲ್ಲೂ ಈ ವ್ಯವಸ್ಥೆಯನ್ನು ಕಡ್ಡಾಯ ಮಾಡಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.
ಯಶವಂತಪುರ ಪ್ರಾದೇಶಿಕ ಸಾರಿಗೆ ಇಲಾಖೆ ಕಚೇರಿ ಆವರಣದಲ್ಲಿ ಸಾರ್ವಜನಿಕ ಪ್ರಯಾಣಿಕ ವಾಹನಗಳಲ್ಲಿ ಜಿಪಿಎಸ್ ಹಾಗೂ ತುರ್ತು ಗಾಬರಿ ಗುಂಡಿ ಅಳವಡಿಕೆ ವ್ಯವಸ್ಥೆಗೆ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಅವರು ಚಾಲನೆ ನೀಡಿದರು. ರಸ್ತೆ ಹಾಗೂ ಹೆದ್ದಾರಿ ಸಾರಿಗೆ ಸಚಿವಾಲಯವು ಜ.1 ರಿಂದ ಅನುಮತಿ ಪಡೆಯುವ ಎಲ್ಲಾ ವಾಹನಗಳಲ್ಲೂ ಜಿಪಿಎಸ್ ಹಾಗೂ ತುರ್ತು ಗಾಬರಿ ಗುಂಡಿಗಳನ್ನು ಅಳಡವಿಸುವಂತೆ ಕಡ್ಡಾಯ ಮಾಡಿದೆ. ಇದೀಗ ಈ ಬಗ್ಗೆ ರಾಜ್ಯ ಸರ್ಕಾರಗಳು ನಿರ್ಧಾರ ಕೈಗೊಳ್ಳಬೇಕಿದೆ ಎಂದು ಹೇಳಿದ್ದಾರೆ.
ಪ್ರಯಾಣಿಕರ ಸುರಕ್ಷತಾ ದೃಷ್ಟಿಯಿಂದ ಇದೊಂದು ಉತ್ತಮವಾದ ಕಾರ್ಯಕ್ರಮವಾಗಿದೆ. ಹೀಗಾಗಿ ನಾವೂ ಕೂಡ ರಾಜ್ಯದಲ್ಲಿ ಈ ನಿಯಮವನ್ನು ಜಾರಿಗೆ ತರಲು ನಿರ್ಧರಿಸಿದ್ದೇವೆ. ಪ್ರಸ್ತುತ ಈ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಶೀಘ್ರದಲ್ಲಿಯೇ ಆದೇಶ ಹೊರಡಿಸಲಾಗುತ್ತದೆ. ವಾಹನಗಳಿಗೆ ವ್ಯವಸ್ಥೆಗಳನ್ನು ಅಳವಡಿಸಲು ಗಡುವುಗಳನ್ನೂ ನೀಡಲಾಗುತ್ತೆದ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos