ಸಂಗ್ರಹ ಚಿತ್ರ 
ರಾಜ್ಯ

ರಾಷ್ಟ್ರೀಯ ಅನುಮತಿ ಪಡೆದಿರುವ ಎಲ್ಲಾ ವಾಣಿಜ್ಯ ವಾಹನಗಳಲ್ಲಿ ಜಿಪಿಎಸ್ ಕಡ್ಡಾಯ: ಸಾರಿಗೆ ಸಚಿವ ತಮ್ಮಣ್ಣ

ಕೇಂದ್ರ ಸರ್ಕಾರದ ನಿರ್ದೇಶನದಂತೆ ವಾಹನಗಳಲ್ಲಿ ಜಿಪಿಎಸ್ ಹಾಗೂ ತುರ್ತು ಗಾಬರಿ ಗುಂಡಿ ಅಳವಡಿಕೆ ವ್ಯವಸ್ಥೆಯನ್ನು ಜಾರಿಗೆ ತಂದಿರುವ ಸರ್ಕಾರ, ಮುಂಬರುವ ದಿನಗಳಲ್ಲಿ ಎಲ್ಲಾ ವಾಣಿಜ್ಯ ಪ್ರಯಾಣಿಕ ವಾಹನಗಳು ಹಾಗೂ ರಾಷ್ಟ್ರೀಯ ಅನುಮತಿ ಪಡೆದಿರುವ...

ಬೆಂಗಳೂರು: ಕೇಂದ್ರ ಸರ್ಕಾರದ ನಿರ್ದೇಶನದಂತೆ ವಾಹನಗಳಲ್ಲಿ ಜಿಪಿಎಸ್ ಹಾಗೂ ತುರ್ತು ಗಾಬರಿ ಗುಂಡಿ ಅಳವಡಿಕೆ ವ್ಯವಸ್ಥೆಯನ್ನು ಜಾರಿಗೆ ತಂದಿರುವ ಸರ್ಕಾರ, ಮುಂಬರುವ ದಿನಗಳಲ್ಲಿ ಎಲ್ಲಾ ವಾಣಿಜ್ಯ ಪ್ರಯಾಣಿಕ ವಾಹನಗಳು ಹಾಗೂ ರಾಷ್ಟ್ರೀಯ ಅನುಮತಿ ಪಡೆದಿರುವ ವಾಣಿಜ್ಯ ವಾಹನಗಳಲ್ಲೂ ಈ ವ್ಯವಸ್ಥೆಯನ್ನು ಕಡ್ಡಾಯ ಮಾಡಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ. 
ಯಶವಂತಪುರ ಪ್ರಾದೇಶಿಕ ಸಾರಿಗೆ ಇಲಾಖೆ ಕಚೇರಿ ಆವರಣದಲ್ಲಿ ಸಾರ್ವಜನಿಕ ಪ್ರಯಾಣಿಕ ವಾಹನಗಳಲ್ಲಿ ಜಿಪಿಎಸ್ ಹಾಗೂ ತುರ್ತು ಗಾಬರಿ ಗುಂಡಿ ಅಳವಡಿಕೆ ವ್ಯವಸ್ಥೆಗೆ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಅವರು ಚಾಲನೆ ನೀಡಿದರು. ರಸ್ತೆ ಹಾಗೂ ಹೆದ್ದಾರಿ ಸಾರಿಗೆ ಸಚಿವಾಲಯವು ಜ.1 ರಿಂದ ಅನುಮತಿ ಪಡೆಯುವ ಎಲ್ಲಾ ವಾಹನಗಳಲ್ಲೂ ಜಿಪಿಎಸ್ ಹಾಗೂ ತುರ್ತು ಗಾಬರಿ ಗುಂಡಿಗಳನ್ನು ಅಳಡವಿಸುವಂತೆ ಕಡ್ಡಾಯ ಮಾಡಿದೆ. ಇದೀಗ ಈ ಬಗ್ಗೆ ರಾಜ್ಯ ಸರ್ಕಾರಗಳು ನಿರ್ಧಾರ ಕೈಗೊಳ್ಳಬೇಕಿದೆ ಎಂದು ಹೇಳಿದ್ದಾರೆ. 
ಪ್ರಯಾಣಿಕರ ಸುರಕ್ಷತಾ ದೃಷ್ಟಿಯಿಂದ ಇದೊಂದು ಉತ್ತಮವಾದ ಕಾರ್ಯಕ್ರಮವಾಗಿದೆ. ಹೀಗಾಗಿ ನಾವೂ ಕೂಡ ರಾಜ್ಯದಲ್ಲಿ ಈ ನಿಯಮವನ್ನು ಜಾರಿಗೆ ತರಲು ನಿರ್ಧರಿಸಿದ್ದೇವೆ. ಪ್ರಸ್ತುತ ಈ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಶೀಘ್ರದಲ್ಲಿಯೇ ಆದೇಶ ಹೊರಡಿಸಲಾಗುತ್ತದೆ. ವಾಹನಗಳಿಗೆ ವ್ಯವಸ್ಥೆಗಳನ್ನು ಅಳವಡಿಸಲು ಗಡುವುಗಳನ್ನೂ ನೀಡಲಾಗುತ್ತೆದ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಹಿರಿಯೂರು ಬಳಿ ಸಮರ್ಥ್ ಶಾಮನೂರು ಕಾರು ಅಪಘಾತ: ಕಾಂಗ್ರೆಸ್ ಶಾಸಕ ಅಪಾಯದಿಂದ ಪಾರು!

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

ಶ್ರೀಶೈಲ: ಹೋಟೆಲ್‌ನಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ; ಕಾರಣ ನಿಗೂಢ