ಸಂಗ್ರಹ ಚಿತ್ರ 
ರಾಜ್ಯ

ಶಬರಿಮಲೆ ವಿವಾದ: ಕೇರಳ ರಾಜ್ಯಕ್ಕೆ ಕೆಎಸ್ಆರ್'ಟಿಸಿ ಬಸ್ ಸೇವೆ ಸ್ಥಗಿತ

ಕೇರಳದ ಪ್ರಸಿದ್ಧ ಪುಣ್ಯ ಕ್ಷೇತ್ರ ಶಬರಿಮಲೆ ಅಯ್ಯಪ್ಪ ಸ್ವಾಮಿ ಸನ್ನಿಧಾನಕ್ಕೆ 10ರಿಂದ 50 ವರ್ಷದೊಳಗಿನ ಮಹಿಳೆಯರು ಪ್ರವೇಶಿಸುವಂತಿಲ್ಲ ಎಂಬ 800 ವರ್ಷಗಳ ಸಂಪ್ರದಾಯವನ್ನು ಇಬ್ಬರು ಮಹಿಳೆಯರು...

ಬೆಂಗಳೂರು: ಕೇರಳದ ಪ್ರಸಿದ್ಧ ಪುಣ್ಯ ಕ್ಷೇತ್ರ ಶಬರಿಮಲೆ ಅಯ್ಯಪ್ಪ ಸ್ವಾಮಿ ಸನ್ನಿಧಾನಕ್ಕೆ 10ರಿಂದ 50 ವರ್ಷದೊಳಗಿನ ಮಹಿಳೆಯರು ಪ್ರವೇಶಿಸುವಂತಿಲ್ಲ ಎಂಬ 800 ವರ್ಷಗಳ ಸಂಪ್ರದಾಯವನ್ನು ಇಬ್ಬರು ಮಹಿಳೆಯರು ಉಲ್ಲಂಘಿಸಿದ ಹಿನ್ನಲೆಯಲ್ಲಿ ಕೇರಳದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಈ ಹಿನ್ನಲೆಯಲ್ಲಿ ರಾಜ್ಯದಿಂದ ಕೇರಳ ರಾಜ್ಯಕ್ಕೆ ತೆರಳುತ್ತಿದ್ದ ಕೆಎಸ್ಆರ್'ಟಿಸಿ ಬಸ್ ಸೇವೆಗಳನ್ನು ಸ್ಥಗಿತಗೊಳಿಸಿದೆ. 
ಇಬ್ಬರು ಮಹಿಳೆಯರು ದೇಗುಲ ಪ್ರವೇಶಿಸಿದ ಹಿನ್ನೆಲೆಯಲ್ಲಿ ಕೇರಳ ರಾಜ್ಯದಲ್ಲಿರುವ ಹಲವು ಸಂಘಟನೆಗಳು ಬಂದ್ ಗೆ ಕರೆ ನೀಡಿದೆ. ಹೀಗಾಗಿ ಮುಂಜಾಗ್ರತಾ ಕ್ರಮ ಕೈಗೊಂಡಿರುವ ಅಧಿಕಾರಿಗಳು ಕೇರಳ ರಾಜ್ಯಕ್ಕೆ ಕೆಎಸ್ಆರ್'ಟಿಸಿ ಬಸ್ ಸೇವೆಗಳನ್ನು ಸ್ಥಗಿತಗೊಳಿಸಿದೆ. 
ಈ ಕುರಿತಂತೆ ಕೆಎಸ್ಆರ್'ಟಿಸಿ ಹೇಳಿಕೆ ಬಿಡುಗಡೆ ಮಾಡಿದ್ದು, ಬೆಂಗಳೂರಿನಿಂದ ಪ್ರತೀನಿತ್ಯ ಕೇರಳ ರಾಜ್ಯಕ್ಕೆ ತೆರಳುತ್ತಿದ್ದ ಬಸ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಮಂಗಳೂರಿನಿಂದ ಕೇರಳ ತೆರಳುತ್ತಿದ್ದ 40 ಬಸ್ ಗಳ ಸೇವೆ ಹಾಗೂ ಇತರೆ ಪ್ರದೇಶಗಳಿಂದ ತೆರಳುತ್ತಿದ್ದ 20 ಬಸ್ ಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT