ಎಚ್ ಡಿ ಕುಮಾರಸ್ವಾಮಿ 
ರಾಜ್ಯ

ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ ಅನುಷ್ಠಾನಕ್ಕೆ ಸರ್ಕಾರದಿಂದ ಆದೇಶ

ಕನ್ನಡ ಪರ ಸಂಘಟನೆಗಳ ವಿರೋಧದ ನಡುವೆಯೇ ರಾಜ್ಯ ಸರ್ಕಾರ ಮುಂಬರುವ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಶಾಲೆಗಳಲ್ಲಿ ಇಂಗ್ಲೀಷ್ ಬೋಧನಾ ಮಾದ್ಯಮ ಪರಿಚಯಿಸಲು ಮುಂದಾಗಿದೆ.

ಬೆಂಗಳೂರು: ಕನ್ನಡ ಪರ ಸಂಘಟನೆಗಳ ವಿರೋಧದ ನಡುವೆಯೇ ರಾಜ್ಯ ಸರ್ಕಾರ ಮುಂಬರುವ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಶಾಲೆಗಳಲ್ಲಿ ಇಂಗ್ಲೀಷ್ ಬೋಧನಾ ಮಾದ್ಯಮ ಪರಿಚಯಿಸಲು ಮುಂದಾಗಿದೆ. ಮತ್ತೀಗ ಸರ್ಕಾರ ಈ ಕುರಿತಂತೆ ಆದೇಶ ಜಾರಿಗೊಳಿಸಿದೆ.
ಕಳೆದ ಎರಡು ತಿಂಗಳ ಹಿಂದೆಯೇ ರಾಜ್ಯ ಸರ್ಕಾರ ಈ ಆದೇಶ ಹೊರಡಿಸಿದ್ದರೂ ಇದುವರೆಗೆ ಯಾವೊಂದು ಜಾಲತಾಣದಲ್ಲಾಗಲಿ, ಸರ್ಕಾರಿ ಪೋರ್ಟಲ್ ಗಳಲ್ಲಾಗಲಿ ಪ್ರಕಟಿಸದೆ ರಹಸ್ಯವಾಗಿಡಲಾಗಿತ್ತು.ಅಕ್ಟೋಬರ್ 30, 2018ರ ದಿನಾಂಕದಂದು ಸರ್ಕಾರ ಹೊರಡಿಸಿದ್ದ ಆದೇಶದ ಪ್ರತಿ ಪತ್ರಿಕೆಗೆ ಲಭ್ಯವಾಗಿದೆ.
ಬಜೆಟ್ ಅಧಿವೇಶನದಲ್ಲಿ  ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾಡಿದ್ದ ಪ್ರಕಟಣೆಯನ್ನು ಅನುಸರಿಸಿ ಈ ಆದೇಶ ನೀಡಲಾಗಿದೆ.ಯೋಜನೆ ಅನುಷ್ಠಾನಕ್ಕಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯು ರಾಜ್ಯ ಶಿಕ್ಷಣ, ಸಂಶೋಧನೆ ಮತ್ತು ತರಬೇತಿ ಇಲಾಖೆಯ (ಡಿಎಸ್ಇಆರ್ಟಿ)  ಜತೆ ಸೇರಿನೋಡಲ್ ಅಧಿಕಾರಿಗಳನ್ನು ನೇಮಕ ಮಾಡಬೇಕಿದೆ.
ಇದಕ್ಕೆ 14 ಕೋಟಿ ರೂ. ಆರ್ಥಿಕ ನೆರವು ನೀಡಲಾಗಿದ್ದು ಮೊದಲ ಹಂತದಲ್ಲಿ ಆಯ್ದ 1,000 ಸರ್ಕಾರಿ ಶಾಲೆಗಳಲ್ಲಿ ಒಂದನೇ ತರಗತಿ ಮಟ್ಟದಲ್ಲಿ ಇಂಗ್ಲಿಷ್ ಶಿಕ್ಷಣವನ್ನು ಅಳವಡಿಸಬೇಕೆಂದು ಆದೇಶದಲ್ಲಿ ಹೇಳಲಾಗಿದೆ. ಇನ್ನು 2017-18 ಶೈಕ್ಷಣಿಕ ವರ್ಷದಿಂದ ಕಾರ್ಯನಿರ್ವಹಿಸುವ ಎಲ್ಲಾ  ಮಾದರಿ ಶಾಲೆಗಳಲ್ಲಿ ಇಂಗ್ಲಿಷ್ ಮಾದ್ಯಮ ಪ್ರಾರಂಭಿಸುವುದು ಕಡ್ಡಾಯವೆನ್ನಲಾಗಿದೆ.
"ಹೊಸ ಶಿಕ್ಷಕರನ್ನು ನೇಮಕ ಮಾಡುವ ಬಗ್ಗೆ ಇನ್ನೂ ಯೋಚಿಸಿಲ್ಲ, ಆದರೆ ಸ್ಥಳೀಯ ಆಂಗ್ಲ  ಸಂಸ್ಥೆಗಳಲ್ಲಿ ಶಿಕ್ಷಣ ಪಡೆದಿರುವ ಅನೇಕ ಶಿಕ್ಷಕರಿದ್ದು ಈಗಿರುವ ಶಿಕ್ಷಕರಿಗೆ ಅತ್ಯುತ್ತಮ ತರಬೇತಿ ಒದಗಿಸುವಂತೆ ನಾವು ೂಚನೆ ನೀಡಿದ್ದೇವೆ.ಶಿಕ್ಷಕರಿಗೆ ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ" ಎಂದು ಡಿಎಸ್ಇಆರ್ಟಿ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಮೊಜ್ತಾಬಾ ಖಮೇನಿ ಜೀವಂತವಾಗಿ ಇದ್ದಾರೋ ಅಥವಾ ಇಲ್ಲವೋ? ಆತಂಕದ ಹಳೆಯ Video ಬಿಡುಗಡೆ ಮಾಡಿದ ಇರಾನ್!