ಸಮ್ಮೇಳನ ಉದ್ಘಾಟಿಸುತ್ತಿರುವ ಎಚ್ ಡಿ ಕುಮಾರಸ್ವಾಮಿ 
ರಾಜ್ಯ

ಧಾರವಾಡ: 84ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಿಎಂ ಕುಮಾರಸ್ವಾಮಿ ಚಾಲನೆ

84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಶುಕ್ರವಾರ ಚಾಲನೆ ನೀಡಿದರು.

ಧಾರವಾಡ: 84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಶುಕ್ರವಾರ ಚಾಲನೆ ನೀಡಿದರು.
ಸಿಎಂ ಕುಮಾರಸ್ವಾಮಿ ಅವರು ದೀಪ ಬೆಳಗಿಸುವ ಮೂಲಕ ಇಲ್ಲಿನ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಮೂರು ದಿನಗಳ ಕಾಲ ನಡೆಯುವ ಅಕ್ಷರ ಜಾತ್ರೆಗೆ ವಿಧ್ಯುಕ್ತ ಚಾಲನೆ ನೀಡಿದರು.
ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಸಿಎಂ, ರಾಜ್ಯದ ಸರ್ಕಾರ ಶಾಲೆಗಳಲ್ಲಿ ಆಂಗ್ಲ ಮಾಧ್ಯಮವನ್ನು ಪ್ರಾಯೋಗಿಕವಾಗಿ ಪ್ರಾರಂಭಿಸಲಾಗುತ್ತಿದ್ದು, ಈ ಕುರಿತು ಸಾಧಕ-ಬಾಧಕಗಳ ಕುರಿತು ಮುಕ್ತ ಚರ್ಚೆಗೆ ಸಿದ್ಧ ಎಂದರು.
ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಿಸುವ ಕುರಿತಂತೆ ರಚನಾತ್ಮಕ ಸಲಹೆಗಳು ಬರಲಿ. ಇದನ್ನು ಸರ್ಕಾರ ಮುಕ್ತ ಮನದಿಂದ ಸ್ವಾಗತಿಸುತ್ತದೆ ಎಂಬ ವಿಷಯವನ್ನು ಸಮ್ಮೇಳನದ ಮುಂದಿಡಲು ಬಯಸುತ್ತೇನೆ ಎಂದರು.
ಇದಕ್ಕು ಮುನ್ನ ಕರ್ನಾಟಕ ಮಹಾವಿದ್ಯಾಲಯದ ಆವರಣದಲ್ಲಿ ಸಮ್ಮೇಳನದ ಪ್ರಮುಖ ಘಟ್ಟವಾದ ಅಧ್ಯಕ್ಷರ ಮೆರವಣಿಗೆಗೆ ಚಾಲನೆ ನೀಡಲಾಯಿತು. ಅಧ್ಯಕ್ಷರಾದ ಡಾ.ಚಂದ್ರಶೇಖರ್ ಕಂಬಾರ ಅವರು ಕರ್ನಾಟಕ ಮಹಾವಿದ್ಯಾಲಯದ ಸಂಸ್ಥಾಪಕರಾದ ಸರ್ ಸಿದ್ದಪ್ಪ ಕಂಬಳಿ, ಅರಟಾಳ್ ರುದ್ರಗೌಡರು ಹಾಗೂ ರೊದ್ದ ಶ್ರೀನಿವಾಸ್ ರಾಯರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿದ ಬಳಿಕ ಅಲಂಕೃತ ಸಾರೋಟಿನಲ್ಲಿ ಆಸೀನರಾದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT