ಸಿದ್ದರಾಮಯ್ಯ 
ರಾಜ್ಯ

ರಾಜಕೀಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಪಿಡಿಓಗಳ ವಿರುದ್ಧ ಕ್ರಮ- ಸಿದ್ದರಾಮಯ್ಯ

ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ರಾಜಕೀಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬಾರದು ಎಂದು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಬಾದಾಮಿ: ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ರಾಜಕೀಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬಾರದು. ಒಂದು ವೇಳೆ ರಾಜಕೀಯದಲ್ಲಿ ತೊಡಗಿಸಿಕೊಂಡಿರುವುದು ಕಂಡುಬಂದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಬಾದಾಮಿಯಲ್ಲಿಂದು  ಎರಡನೇ ಕೆಡಿಪಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಅಧಿಕಾರಿಗಳು ಸರ್ಕಾರಿ ಕೆಲಸ ಬಿಟ್ಟು ಬೇರೆ ಯಾವುದರಲ್ಲೂ ತೊಡಗಿಸಿಕೊಳ್ಳಬಾರದು, ಸರ್ಕಾರದ ಸೌಲಭ್ಯಗಳನ್ನು ಜನರಿಗೆ ತಲುಪಿಸಿ ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಹೇಳಿದರು.

ವಿವಿಧ ಇಲಾಖೆಗಳ ಅನುದಾನದ ಬಗ್ಗೆ ಸಮರ್ಪಕ ಮಾಹಿತಿ ಒದಗಿಸದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಿದ್ದರಾಮಯ್ಯ, ಸರಿಯಾಗಿ ಕೆಲಸ ನಿರ್ವಹಿಸದಿದ್ದ ಅಧಿಕಾರಿಗಳು ತಾಲೂಕಿನಲ್ಲಿ ಎಲ್ಲಿಯೂ ಕೆಲಸ ಮಾಡಲು ನಾಲಾಯಕ್ ಆಗಿದ್ದು, ಪ್ರತಿದಿನ ಡೈರಿ ನಿರ್ವಹಣೆ ಮಾಡಬೇಕು. ಆ ಡೈರಿಯಲ್ಲಿ ಪ್ರತಿದಿನದ ಕೆಲಸಗಳನ್ನು ನಮೂದಿಸಬೇಕು. ಮುಂದಿನ ಸಭೆಯಲ್ಲಿ ಅದನ್ನು ಪರಾಮರ್ಶೆ ನಡೆಸುತ್ತೇನೆ. ಒಂದು ವೇಳೆ ಅದರಲ್ಲಿ ತಪ್ಪು ಮಾಹಿತಿ ಕಂಡುಬಂದಲ್ಲಿ  ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸೂಚನೆ ನೀಡಿದರು.

ಇದೇ ವೇಳೆ ನಗರಾಭಿವೃದ್ದಿ ಸಚಿವ ಯುಟಿ ಖಾದರ್,  ಕ್ಷೇತ್ರದಲ್ಲಿ ಆಗಬೇಕಾಗಿರುವ ತಮ್ಮ ಇಲಾಖೆಗೆ ಸಂಬಂಧಿಸಿದ ಅಭಿವೃದ್ದಿ ಕೆಲಸಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.  

ಬಾದಾಮಿ, ಐಹೊಳೆ, ಪಟ್ಟಣದಕಲ್ಲು ಮತ್ತಿತರ ಐತಿಹಾಸಿಕ ಸ್ಥಳಗಳ  ಅಭಿವೃದ್ಧಿ ಸಂಬಂಧ ಪ್ರವಾಸೋದ್ಯಮ ಸಚಿವ ಸಾರಾಮಹೇಶ್ ಸಮ್ಮುಖದಲ್ಲಿ  ಇಲಾಖೆಯ ಅಧಿಕಾರಿಗಳೊಂದಿಗೆ ಸಿದ್ದರಾಮಯ್ಯ ಚರ್ಚೆ ನಡೆಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT