ಚಿಕ್ಕೋಡಿ: ಲಾರಿ ಮತ್ತು ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದು ಕುಟುಂಬದ ಆರು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕೋಡಿಯಲ್ಲಿ ಸಂಭವಿಸಿದೆ.
ನಿಪ್ಪಾಣಿಯ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸ್ಥವನಿಧಿ ಘಾಟ್ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು ಸ್ಥಳದಲ್ಲೇ ಆರು ಮಂದಿ ಸಾವನ್ನಪ್ಪಿದ್ದಾರೆ. ಮೃತರನ್ನು ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಗಡಹಿಂಗ್ಲಜ ತಾಲೂಕಿನ ಮುರುಗೋಡ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ.
ಕಾರಿನ ಮಾಲೀಕ ಮೊಸಿನ್ ಖಾಜಿ, ರಹಿನಾ ಜಮಾದಾರ(55), ಆಫ್ರಿನಾ ಜಮಾದಾರ(33), ಜುನೆದಖಾನ್ ಜಮಾದಾರ(30), ದಿಲಾವರ ಜಮಾದಾರಶ್(56) ಹಾಗೂ 5 ವರ್ಷದ ಮಗು ಸಾವನ್ನಪ್ಪಿದೆ.
ಅಪಘಾತ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಇನ್ನು ಕಾರಿನ ಒಳಗೆ ಸಿಲುಕಿರುವ ಮೃತದೇಹಗಳನ್ನು ಹೊರತೆಗೆಯುವಲ್ಲಿ ನಿರತರಾಗಿದ್ದಾರೆ.