ಸಂಗ್ರಹ ಚಿತ್ರ 
ರಾಜ್ಯ

ಬಸ್ ಪ್ರಯಾಣ ದರ ಹೆಚ್ಚಳ ವಾರದಲ್ಲಿ ನಿರ್ಧಾರ : ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ ಪ್ರಯಾಣ ದರ ಏರಿಕೆ ಸಂಬಂಧ ಇನ್ನೊಂದು ವಾರದಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಹುಬ್ಬಳ್ಳಿ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ ಪ್ರಯಾಣ ದರ ಏರಿಕೆ ಸಂಬಂಧ ಇನ್ನೊಂದು ವಾರದಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

 ಎಲ್ಲ ಸಾರಿಗೆ ಸಂಸ್ಥೆಗಳೂ ಆರ್ಥಿಕವಾಗಿ ಸಂಕಷ್ಟದಲ್ಲಿವೆ. ಹೀಗಾಗಿ ಪ್ರಯಾಣ ದರ ಹೆಚ್ಚಿಸಬೇಕೆಂಬ ಬೇಡಿಕೆ ಇದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಈ ಹಿಂದೆ ತೈಲ  ಬೆಲೆ ಏರಿಕೆಯಾದಾಗ ಅವುಗಳ ಮೇಲಿನ ತೆರಿಗೆ ಪ್ರಮಾಣವನ್ನು ಕಡಿಮೆ ಮಾಡಲಾಗಿತ್ತು. ಈಗ ತೈಲ ಬೆಲೆ ಕಡಿಮೆಯಾಗಿರುವುದರಿಂದ ಏರಿಸಲಾಗಿದೆ. ಇಷ್ಠಾದರೂ ರಾಜ್ಯದಲ್ಲಿನ ತೆರಿಗೆ ಪ್ರಮಾಣ ದೇಶದಲ್ಲಿಯೇ ಕಡಿಮೆ ಇದೆ ಎಂದು ತಮ್ಮ ನಿರ್ಧಾರವನ್ನು  ಸಮರ್ಥಿಸಿಕೊಂಡರು.

ಸಾಲ ಮನ್ನಾಕ್ಕಾಗಿ ಯಾವುದೇ ಇಲಾಖೆ ಹಣವನ್ನು ಬಳಸಿಕೊಂಡಿಲ್ಲ. ಅದಕ್ಕಾಗಿಯೇ 9 ಸಾವಿರ ಕೋಟಿ ರೂಪಾಯಿ ತೆಗೆದಿರಿಸಲಾಗಿದೆ ಎಂದು ಅವರು ಹೇಳಿದರು.

ಈಗಾಗಲೇ ಸಾರಿಗೆ ಇಲಾಖೆ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯಾಪ್ತಿಯ ಬಸ್​ಗಳ ಪ್ರಯಾಣ ದರವನ್ನು ಶೇ.14ರಿಂದ 18ರವರೆಗೆ ಹೆಚ್ಚಿಸುವ ಪ್ರಸ್ತಾವವನ್ನು ಸರ್ಕಾರಕ್ಕೆ ಸಲ್ಲಿಸಿದೆ. ಪ್ರಯಾಣದರ ಹೆಚ್ಚಳಕ್ಕೆ ಸಮ್ಮತಿ ನೀಡುವಂತೆ ಹಣಕಾಸು ಇಲಾಖೆ ಸಿಎಂ ಕುಮಾರಸ್ವಾಮಿಗೆ ಸಲಹೆ ನೀಡಿದೆ ಎನ್ನಲಾಗಿದೆ.

ಈ ಹಿಂದೆ ಕೆಎಸ್​ಆರ್​ಟಿಸಿ, ಬಿಎಂಟಿಸಿ, ವಾಯುವ್ಯ ಮತ್ತು ಈಶಾನ್ಯ ಸಾರಿಗೆಗಳು ಮೂರು ತಿಂಗಳ ಹಿಂದೆಯೇ ಶೇ. 18 ರಷ್ಟು ಪ್ರಯಾಣ ದರ ಹೆಚ್ಚಿಸುವಂತೆ ಪ್ರಸ್ತಾವ ಸಲ್ಲಿಸಿದ್ದವು. ನಂತರ ದರ ಏರಿಕೆಗೆ ಸಾರ್ವಜನಿಕ ವಲಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಸಿಎಂ ಕುಮಾರಸ್ವಾಮಿ ಕೂಡ ಸಾರಿಗೆ ಇಲಾಖೆ ಪ್ರಸ್ತಾಪ ತಿರಸ್ಕರಿಸಿದ್ದರು.  

ಇದೀಗ ಕಳೆದ 10 ವಾರಗಳಿಂದ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ದರ ಇಳಿಕೆಯಾಗುತ್ತಿದ್ದು ಸರ್ಕಾರದ ಆದಾಯಕ್ಕೆ ಹೊಡೆತ ಬೀಳುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತೆರಿಗೆ ಏರಿಕೆ ಮಾಡಿದ್ದು,ಮತ್ತೆ ಪ್ರಯಾಣ ದರ ಹೆಚ್ಚಳದ ಬಿಸಿ ತಟ್ಟಲಿದೆಯೇ ಎಂಬ ಆತಂಕ ಎದುರಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT