ಸಂಗ್ರಹ ಚಿತ್ರ 
ರಾಜ್ಯ

ಬಸ್ ಪ್ರಯಾಣ ದರ ಹೆಚ್ಚಳ ವಾರದಲ್ಲಿ ನಿರ್ಧಾರ : ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ ಪ್ರಯಾಣ ದರ ಏರಿಕೆ ಸಂಬಂಧ ಇನ್ನೊಂದು ವಾರದಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಹುಬ್ಬಳ್ಳಿ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ ಪ್ರಯಾಣ ದರ ಏರಿಕೆ ಸಂಬಂಧ ಇನ್ನೊಂದು ವಾರದಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

 ಎಲ್ಲ ಸಾರಿಗೆ ಸಂಸ್ಥೆಗಳೂ ಆರ್ಥಿಕವಾಗಿ ಸಂಕಷ್ಟದಲ್ಲಿವೆ. ಹೀಗಾಗಿ ಪ್ರಯಾಣ ದರ ಹೆಚ್ಚಿಸಬೇಕೆಂಬ ಬೇಡಿಕೆ ಇದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಈ ಹಿಂದೆ ತೈಲ  ಬೆಲೆ ಏರಿಕೆಯಾದಾಗ ಅವುಗಳ ಮೇಲಿನ ತೆರಿಗೆ ಪ್ರಮಾಣವನ್ನು ಕಡಿಮೆ ಮಾಡಲಾಗಿತ್ತು. ಈಗ ತೈಲ ಬೆಲೆ ಕಡಿಮೆಯಾಗಿರುವುದರಿಂದ ಏರಿಸಲಾಗಿದೆ. ಇಷ್ಠಾದರೂ ರಾಜ್ಯದಲ್ಲಿನ ತೆರಿಗೆ ಪ್ರಮಾಣ ದೇಶದಲ್ಲಿಯೇ ಕಡಿಮೆ ಇದೆ ಎಂದು ತಮ್ಮ ನಿರ್ಧಾರವನ್ನು  ಸಮರ್ಥಿಸಿಕೊಂಡರು.

ಸಾಲ ಮನ್ನಾಕ್ಕಾಗಿ ಯಾವುದೇ ಇಲಾಖೆ ಹಣವನ್ನು ಬಳಸಿಕೊಂಡಿಲ್ಲ. ಅದಕ್ಕಾಗಿಯೇ 9 ಸಾವಿರ ಕೋಟಿ ರೂಪಾಯಿ ತೆಗೆದಿರಿಸಲಾಗಿದೆ ಎಂದು ಅವರು ಹೇಳಿದರು.

ಈಗಾಗಲೇ ಸಾರಿಗೆ ಇಲಾಖೆ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯಾಪ್ತಿಯ ಬಸ್​ಗಳ ಪ್ರಯಾಣ ದರವನ್ನು ಶೇ.14ರಿಂದ 18ರವರೆಗೆ ಹೆಚ್ಚಿಸುವ ಪ್ರಸ್ತಾವವನ್ನು ಸರ್ಕಾರಕ್ಕೆ ಸಲ್ಲಿಸಿದೆ. ಪ್ರಯಾಣದರ ಹೆಚ್ಚಳಕ್ಕೆ ಸಮ್ಮತಿ ನೀಡುವಂತೆ ಹಣಕಾಸು ಇಲಾಖೆ ಸಿಎಂ ಕುಮಾರಸ್ವಾಮಿಗೆ ಸಲಹೆ ನೀಡಿದೆ ಎನ್ನಲಾಗಿದೆ.

ಈ ಹಿಂದೆ ಕೆಎಸ್​ಆರ್​ಟಿಸಿ, ಬಿಎಂಟಿಸಿ, ವಾಯುವ್ಯ ಮತ್ತು ಈಶಾನ್ಯ ಸಾರಿಗೆಗಳು ಮೂರು ತಿಂಗಳ ಹಿಂದೆಯೇ ಶೇ. 18 ರಷ್ಟು ಪ್ರಯಾಣ ದರ ಹೆಚ್ಚಿಸುವಂತೆ ಪ್ರಸ್ತಾವ ಸಲ್ಲಿಸಿದ್ದವು. ನಂತರ ದರ ಏರಿಕೆಗೆ ಸಾರ್ವಜನಿಕ ವಲಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಸಿಎಂ ಕುಮಾರಸ್ವಾಮಿ ಕೂಡ ಸಾರಿಗೆ ಇಲಾಖೆ ಪ್ರಸ್ತಾಪ ತಿರಸ್ಕರಿಸಿದ್ದರು.  

ಇದೀಗ ಕಳೆದ 10 ವಾರಗಳಿಂದ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ದರ ಇಳಿಕೆಯಾಗುತ್ತಿದ್ದು ಸರ್ಕಾರದ ಆದಾಯಕ್ಕೆ ಹೊಡೆತ ಬೀಳುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತೆರಿಗೆ ಏರಿಕೆ ಮಾಡಿದ್ದು,ಮತ್ತೆ ಪ್ರಯಾಣ ದರ ಹೆಚ್ಚಳದ ಬಿಸಿ ತಟ್ಟಲಿದೆಯೇ ಎಂಬ ಆತಂಕ ಎದುರಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT