ಉಡುಪಿ: ಹಲವು ದಿನಗಳಿಂದ ನಾಪತ್ತೆಯಾಗಿರುವ 7 ಮಂದಿ ಮೀನುಗಾರರನ್ನು ಪತ್ತೆ ಮಾಡುವಂತೆ ಆಗ್ರಹಿಸಿ ಸಾವಿರಾರು ಮೀನುಗಾರರು ಕಡಲಿಗಿಳಿಯದೆ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಭಾನುವಾರ ಪ್ರತಿಭಟನೆ ನಡೆಸುತ್ತಿದ್ದಾರೆ.
ಮಲ್ಪೆ ಮೀನುಗಾರರ ಸಂಘದ ನೇತೃತ್ವದಲ್ಲಿ ಮಲ್ಪೆ ಬಂದರ್ ನಿಂದ ಕರಾವಳಿ ಬೈಪಾಲ್ ವರೆಗೆ ಪ್ರತಿಭಟನೆ ನಡೆಯುತ್ತಿದ್ದು, ಪ್ರತಿಭಟನಾ ಮೆರವಣಿಗೆಯಲ್ಲಿ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದ ಸಾವಿರಾರು ಮೀನುಗಾರರು ಭಾಗವಹಿಸಿದ್ದಾರೆ.
ಪ್ರತಿಭಟನೆಯಲ್ಲಿ ಭಾಗಿಯಾಗಿರುವ ಮೀನುಗಾರರು ನ್ಯಾಯ ಬೇಕೆಂದು ಘೋಷಣೆಗಳನ್ನು ಕೂಗುತ್ತಿದ್ದಾರೆ. ಅಲ್ಲದೆ, ಮೀನುಗಾರರು ನಾಪತ್ತೆಯಾಗಿ ಹಲವು ದಿನಗಳಾದರೂ ಪತ್ತೆ ಮಾಡದ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ನಡುವೆ ಮಲ್ಪೆ ಮೀನುಗಾರರ ಸಂಘ ಆಯೋಜಿಸಿರುವ ರಾಸ್ತಾ ರೋಕೋ ಚಳುವಳಿಯನ್ನು ಬೆಂಬಲಿಸಿ ಮಂಗಳೂರು ನಗರದ ಬಂದರನ್ನೂ ಸಂಪೂರ್ಣವಾಗಿ ಬಂದ್ ಮಾಡಲಾಗಿದೆ.