ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಮರ ಕಡಿಯುವ ವಿಚಾರದಲ್ಲಿ ಜಗಳ; ಯುವಕನ ಹತ್ಯೆ

ಜಮೀನಿನನ್ನಿದ್ದ ಮರವೊಂದನ್ನು ಸಾವಿರ ರೂಪಾಯಿಗೆ ಮಾರಾಟ ಮಾಡುವ ವಿಚಾರದಲ್ಲಿ ...

ಬೆಂಗಳೂರು: ಜಮೀನಿನನ್ನಿದ್ದ ಮರವೊಂದನ್ನು ಸಾವಿರ ರೂಪಾಯಿಗೆ ಮಾರಾಟ ಮಾಡುವ ವಿಚಾರದಲ್ಲಿ ಜಗಳವುಂಟಾಗಿ 23 ವರ್ಷದ ಯುವಕನನ್ನು ಕೊಚ್ಚಿ ಕೊಲೆ ಮಾಡಿದ ಘಟನೆ ನೆಲಮಂಗಲ ಸಮೀಪ ಮಹಿಮಾಪುರದಲ್ಲಿ ವಾರದ ಹಿಂದೆ ನಡೆದಿದೆ. ಯುವಕನ ಮೃತದೇಹ ನಿನ್ನೆ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಸಿಕ್ಕಿದೆ.

ಮೃತ ಯುವಕನನ್ನು ನವೀನ್ ಎಂದು ಗುರುತಿಸಲಾಗಿದ್ದು ಈತ ಮಹಿಮಾಪುರದಲ್ಲಿ ಫೈನಾನ್ಸಿಯರ್ ಆಗಿ ಕೆಲಸ ಮಾಡುತ್ತಿದ್ದನು. ಘಟನೆಗೆ ಸಂಬಂಧಿಸಿ ಪೊಲೀಸರು ಆತನ ಸಂಬಂಧಿ ವೇಣುಗೋಪಾಲ್, ಬಂಡೆ ನವೀನ್, ತಿಮ್ಮರಾಜು, ಸುರೇಶ್ ಮತ್ತು ಚಂದ್ರಶೇಖರ್ ಎಂಬುವವರನ್ನು ಬಂಧಿಸಿದ್ದಾರೆ.

ಕಳೆದ ಭಾನುವಾರ ನವೀನ್ ಮತ್ತು ವೇಣುಗೋಪಾಲ್  ಮಧ್ಯೆ ಜಗಳವಾಗಿತ್ತು. ಮರುದಿನ ವೇಣುಗೋಪಾಲ್ ನವೀನ್ ನನ್ನು ಕಾರಿನಲ್ಲಿ ಅಪಹರಿಸಿದ್ದನು. ಆತನ ಜೊತೆ ಮೂವರು ಸ್ನೇಹಿತರಿದ್ದರು. ಕಾರಿನಲ್ಲಿ ಸಕಲೇಶಪುರಕ್ಕೆ ಕರೆದುಕೊಂಡು ಹೋಗಿ ಚೂರಿಯಿಂದ ಇರಿದು ಕೊಂದಿದ್ದಾರೆ. ಶವವನ್ನು ಕಿರಿದಾದ ಸ್ಥಳದಲ್ಲಿ ಎಸೆದು ಬಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಮೃತದೇಹವನ್ನು ಶವಪರೀಕ್ಷೆಗೆ ನೆಲಮಂಗಲಕ್ಕೆ ತರಲಾಯಿತು. ತನಿಖೆ ವೇಳೆ ವೇಣುಗೋಪಾಲ್, ಮರ ಕಡಿಯುವ ವಿಚಾರದಲ್ಲಿ ನವೀನ್ ಮತ್ತು ಆತನ ಪೋಷಕರೊಂದಿಗೆ ನಮಗೆ ಜಗಳವಾಗಿತ್ತು ಎಂದು ಬಾಯ್ಬಿಟ್ಟಿದ್ದಾನೆ. ವೇಣುಗೋಪಾಲ್ ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕಾರನ್ನು ಕೂಡ ವಶಪಡಿಸಿಕೊಳ್ಳಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

SCROLL FOR NEXT