ರಾಜ್ಯ

ಭಾರತ್ ಬಂದ್: ರಜೆ ಘೋಷಣೆ ತೀರ್ಮಾನ ಆಯಾ ಶಾಲಾ-ಕಾಲೇಜುಗಳಿಗೆ ಬಿಟ್ಟದ್ದು

ದೇಶಾದ್ಯಂತ ಕಾರ್ಮಿಕರು ಮಂಗಳವಾರ ಹಾಗೂ ಬುಧವಾರ ಮುಷ್ಕರ ಕೈಗೊಂಡಿರುವ ಹಿನ್ನೆಲೆಯಲ್ಲಿ ಎರಡು ದಿನಗಳ ರಜೆ ಘೋಷಣೆ ತೀರ್ಮಾನವನ್ನು ಆಯಾ ಶಾಲಾ-ಕಾಲೇಜುಗಳ ಆಡಳಿತಕ್ಕೆ ಬಿಡಲಾಗಿದೆ ಎಂದು...

ಬೆಂಗಳೂರು: ದೇಶಾದ್ಯಂತ ಕಾರ್ಮಿಕರು ಮಂಗಳವಾರ ಹಾಗೂ ಬುಧವಾರ ಮುಷ್ಕರ ಕೈಗೊಂಡಿರುವ ಹಿನ್ನೆಲೆಯಲ್ಲಿ ಎರಡು ದಿನಗಳ ರಜೆ ಘೋಷಣೆ ತೀರ್ಮಾನವನ್ನು ಆಯಾ ಶಾಲಾ-ಕಾಲೇಜುಗಳ ಆಡಳಿತಕ್ಕೆ ಬಿಡಲಾಗಿದೆ ಎಂದು ಖಾಸಗಿ ಶಾಲೆಗಳ ಆಡಳಿತ ಒಕ್ಕೂಟದ ಕಾರ್ಯದರ್ಶಿ ಶಶಿಕುಮಾರ್ ತಿಳಿಸಿದ್ದಾರೆ.

ದೇಶಾದ್ಯಂತ ಮಂಗಳವಾರ ಹಾಗೂ ಬುಧವಾರ ಮುಷ್ಕರ ನಡೆಸಲು ಹಲವು ಕಾರ್ಮಿಕ ಸಂಘಟನೆಗಳು ನಿರ್ಧರಿಸಿದ್ದಾರೆ. ರಾಜ್ಯದಲ್ಲೂ ಎಲ್ಲಾ ಕಾರ್ಮಿಕರು ಈ ಮುಷ್ಕರದಲ್ಲಿ ಭಾಗಿಯಾಗುವ ಸಾಧ್ಯತೆಗಳಿವೆ. ಗಲಾಟೆ, ಗಲಭೆಗಳು ನಡೆಯುವ ಸಾಧ್ಯತೆಯಿದೆ. ಆದರಿಂದ ಮುಂಜಾಗೃತ ಕ್ರಮವಾಗಿ ಶಾಲಾ ಮಕ್ಕಳಿಗೆ ತೊಂದರೆ ಆಗಬಾರದೆಂಬ ಕಾರಣಕ್ಕೆ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಶಶಿಕುಮಾರ್ ತಿಳಿಸಿದ್ದಾರೆ.

ಮುಷ್ಕರಕ್ಕೆ ಖಾಸಗಿ ಶಾಲೆಗಳು ಬೆಂಬಲ ಕೊಡುತ್ತಿದ್ದೇವೆ ಅಂತ ಅಂದುಕೊಳ್ಳಬೇಡಿ. ನಮಗೆ ಮಕ್ಕಳ ಸುರಕ್ಷತೆ ಮುಖ್ಯ. ಖಾಸಗಿ ಶಾಲೆಗಳ ಆಡಳಿತ ಒಕ್ಕೂಟದ ಸದಸ್ಯರು ಸೇರಿ ಈ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT