ರಾಜ್ಯ

ಭಾರತ್ ಬಂದ್: ರಜೆ ಘೋಷಣೆ ತೀರ್ಮಾನ ಆಯಾ ಶಾಲಾ-ಕಾಲೇಜುಗಳಿಗೆ ಬಿಟ್ಟದ್ದು

ದೇಶಾದ್ಯಂತ ಕಾರ್ಮಿಕರು ಮಂಗಳವಾರ ಹಾಗೂ ಬುಧವಾರ ಮುಷ್ಕರ ಕೈಗೊಂಡಿರುವ ಹಿನ್ನೆಲೆಯಲ್ಲಿ ಎರಡು ದಿನಗಳ ರಜೆ ಘೋಷಣೆ ತೀರ್ಮಾನವನ್ನು ಆಯಾ ಶಾಲಾ-ಕಾಲೇಜುಗಳ ಆಡಳಿತಕ್ಕೆ ಬಿಡಲಾಗಿದೆ ಎಂದು...

ಬೆಂಗಳೂರು: ದೇಶಾದ್ಯಂತ ಕಾರ್ಮಿಕರು ಮಂಗಳವಾರ ಹಾಗೂ ಬುಧವಾರ ಮುಷ್ಕರ ಕೈಗೊಂಡಿರುವ ಹಿನ್ನೆಲೆಯಲ್ಲಿ ಎರಡು ದಿನಗಳ ರಜೆ ಘೋಷಣೆ ತೀರ್ಮಾನವನ್ನು ಆಯಾ ಶಾಲಾ-ಕಾಲೇಜುಗಳ ಆಡಳಿತಕ್ಕೆ ಬಿಡಲಾಗಿದೆ ಎಂದು ಖಾಸಗಿ ಶಾಲೆಗಳ ಆಡಳಿತ ಒಕ್ಕೂಟದ ಕಾರ್ಯದರ್ಶಿ ಶಶಿಕುಮಾರ್ ತಿಳಿಸಿದ್ದಾರೆ.

ದೇಶಾದ್ಯಂತ ಮಂಗಳವಾರ ಹಾಗೂ ಬುಧವಾರ ಮುಷ್ಕರ ನಡೆಸಲು ಹಲವು ಕಾರ್ಮಿಕ ಸಂಘಟನೆಗಳು ನಿರ್ಧರಿಸಿದ್ದಾರೆ. ರಾಜ್ಯದಲ್ಲೂ ಎಲ್ಲಾ ಕಾರ್ಮಿಕರು ಈ ಮುಷ್ಕರದಲ್ಲಿ ಭಾಗಿಯಾಗುವ ಸಾಧ್ಯತೆಗಳಿವೆ. ಗಲಾಟೆ, ಗಲಭೆಗಳು ನಡೆಯುವ ಸಾಧ್ಯತೆಯಿದೆ. ಆದರಿಂದ ಮುಂಜಾಗೃತ ಕ್ರಮವಾಗಿ ಶಾಲಾ ಮಕ್ಕಳಿಗೆ ತೊಂದರೆ ಆಗಬಾರದೆಂಬ ಕಾರಣಕ್ಕೆ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಶಶಿಕುಮಾರ್ ತಿಳಿಸಿದ್ದಾರೆ.

ಮುಷ್ಕರಕ್ಕೆ ಖಾಸಗಿ ಶಾಲೆಗಳು ಬೆಂಬಲ ಕೊಡುತ್ತಿದ್ದೇವೆ ಅಂತ ಅಂದುಕೊಳ್ಳಬೇಡಿ. ನಮಗೆ ಮಕ್ಕಳ ಸುರಕ್ಷತೆ ಮುಖ್ಯ. ಖಾಸಗಿ ಶಾಲೆಗಳ ಆಡಳಿತ ಒಕ್ಕೂಟದ ಸದಸ್ಯರು ಸೇರಿ ಈ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT