ರಾಜ್ಯ

ಭಾರತ್ ಬಂದ್: ರಜೆ ಘೋಷಣೆ ತೀರ್ಮಾನ ಆಯಾ ಶಾಲಾ-ಕಾಲೇಜುಗಳಿಗೆ ಬಿಟ್ಟದ್ದು

ದೇಶಾದ್ಯಂತ ಕಾರ್ಮಿಕರು ಮಂಗಳವಾರ ಹಾಗೂ ಬುಧವಾರ ಮುಷ್ಕರ ಕೈಗೊಂಡಿರುವ ಹಿನ್ನೆಲೆಯಲ್ಲಿ ಎರಡು ದಿನಗಳ ರಜೆ ಘೋಷಣೆ ತೀರ್ಮಾನವನ್ನು ಆಯಾ ಶಾಲಾ-ಕಾಲೇಜುಗಳ ಆಡಳಿತಕ್ಕೆ ಬಿಡಲಾಗಿದೆ ಎಂದು...

ಬೆಂಗಳೂರು: ದೇಶಾದ್ಯಂತ ಕಾರ್ಮಿಕರು ಮಂಗಳವಾರ ಹಾಗೂ ಬುಧವಾರ ಮುಷ್ಕರ ಕೈಗೊಂಡಿರುವ ಹಿನ್ನೆಲೆಯಲ್ಲಿ ಎರಡು ದಿನಗಳ ರಜೆ ಘೋಷಣೆ ತೀರ್ಮಾನವನ್ನು ಆಯಾ ಶಾಲಾ-ಕಾಲೇಜುಗಳ ಆಡಳಿತಕ್ಕೆ ಬಿಡಲಾಗಿದೆ ಎಂದು ಖಾಸಗಿ ಶಾಲೆಗಳ ಆಡಳಿತ ಒಕ್ಕೂಟದ ಕಾರ್ಯದರ್ಶಿ ಶಶಿಕುಮಾರ್ ತಿಳಿಸಿದ್ದಾರೆ.

ದೇಶಾದ್ಯಂತ ಮಂಗಳವಾರ ಹಾಗೂ ಬುಧವಾರ ಮುಷ್ಕರ ನಡೆಸಲು ಹಲವು ಕಾರ್ಮಿಕ ಸಂಘಟನೆಗಳು ನಿರ್ಧರಿಸಿದ್ದಾರೆ. ರಾಜ್ಯದಲ್ಲೂ ಎಲ್ಲಾ ಕಾರ್ಮಿಕರು ಈ ಮುಷ್ಕರದಲ್ಲಿ ಭಾಗಿಯಾಗುವ ಸಾಧ್ಯತೆಗಳಿವೆ. ಗಲಾಟೆ, ಗಲಭೆಗಳು ನಡೆಯುವ ಸಾಧ್ಯತೆಯಿದೆ. ಆದರಿಂದ ಮುಂಜಾಗೃತ ಕ್ರಮವಾಗಿ ಶಾಲಾ ಮಕ್ಕಳಿಗೆ ತೊಂದರೆ ಆಗಬಾರದೆಂಬ ಕಾರಣಕ್ಕೆ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಶಶಿಕುಮಾರ್ ತಿಳಿಸಿದ್ದಾರೆ.

ಮುಷ್ಕರಕ್ಕೆ ಖಾಸಗಿ ಶಾಲೆಗಳು ಬೆಂಬಲ ಕೊಡುತ್ತಿದ್ದೇವೆ ಅಂತ ಅಂದುಕೊಳ್ಳಬೇಡಿ. ನಮಗೆ ಮಕ್ಕಳ ಸುರಕ್ಷತೆ ಮುಖ್ಯ. ಖಾಸಗಿ ಶಾಲೆಗಳ ಆಡಳಿತ ಒಕ್ಕೂಟದ ಸದಸ್ಯರು ಸೇರಿ ಈ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

SCROLL FOR NEXT