ಹೆಚ್ ಡಿ ಕುಮಾರಸ್ವಾಮಿ, ಸಿದ್ದರಾಮಯ್ಯ(ಸಂಗ್ರಹ ಚಿತ್ರ) 
ರಾಜ್ಯ

ಕನ್ನಡ-ಇಂಗ್ಲಿಷ್ ಮಾಧ್ಯಮದಲ್ಲಿ ಕಲಿಕೆ; ಮೈತ್ರಿಪಕ್ಷಗಳ ಮಧ್ಯೆ ಮತ್ತೆ ಭಿನ್ನಮತ

ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಿಸುವ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರ ...

ಧಾರವಾಡ: ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಿಸುವ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರ ಪ್ರಸ್ತಾವನೆಗೆ ಮೈತ್ರಿಕೂಟದಲ್ಲಿ ತೀವ್ರ ಹಿನ್ನಡೆಯುಂಟಾಗಿದ್ದು ಸಮನ್ವಯ ಸಮಿತಿ ಅಧ್ಯಕ್ಷ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಾಥಮಿಕ ಹಂತದಲ್ಲಿ ಕನ್ನಡ ಮಾಧ್ಯಮ ಮುಂದುವರಿಸುವ ಕುರಿತು ಮತ್ತೊಮ್ಮೆ ಪ್ರತಿಪಾದಿಸಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಬಳಿ ಮಾತನಾಡುವುದಾಗಿಯೂ ಸಿದ್ದರಾಮಯ್ಯ ಹೇಳಿದ್ದಾರೆ. ಧಾರವಾಡದಲ್ಲಿ ನಿನ್ನೆ ತೆರೆಕಂಡ 84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 7ನೇ ತರಗತಿಯವರೆಗೆ ಪ್ರಾಥಮಿಕ ಶಿಕ್ಷಣ ಕಡ್ಡಾಯವಾಗಿ ಕನ್ನಡದಲ್ಲಿಯೇ ಇರಬೇಕೆಂದು ಸಿದ್ದರಾಮಯ್ಯ ಬಲವಾಗಿ ಹೇಳಿದ್ದಾರೆ.

ಇಂಗ್ಲಿಷ್ ಕೇವಲ ಒಂದು ಭಾಷೆ ಮಾತ್ರ. ಅದು ಜ್ಞಾನ ಗಳಿಕೆಗೆ ಮಾಧ್ಯಮವಲ್ಲ. ಜ್ಞಾನವನ್ನು ಮಕ್ಕಳು ಪಡೆಯುವುದು ಮಾತೃಭಾಷೆ ಮೂಲಕ ಎಂದು ಹೇಳಿದ ಸಿದ್ದರಾಮಯ್ಯ, ಉನ್ನತ ಶಿಕ್ಷಣದಲ್ಲಿ ಆಂಗ್ಲಮಾಧ್ಯಮ ಸಹಾಯವಾಗುತ್ತದೆ ಎಂಬುದು ಕೇವಲ ನಿಮಿತ್ತ ಮಾತ್ರ ಎಂದರು.

84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 9 ವರ್ಷದ ಬಾಲಕ ಇದುವರೆಗಿನ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರ ಹೆಸರು ಹೇಳಿ ಪ್ರೇಕ್ಷಕರನ್ನು ಬೆರಗುಗೊಳಿಸಿದ ಘಟನೆ ನಡೆಯಿತು. ಅಷ್ಟೇ ಅಲ್ಲದೆ ಈ ಬಾಲಕನಿಗೆ ಕರ್ನಾಟಕದ ಹಲವು ತಾಲ್ಲೂಕುಗಳು ಮತ್ತು ಗ್ರಾಮಗಳ ಹೆಸರುಗಳು ಕೂಡ ಗೊತ್ತಿದೆ. ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ರೊಡಲ್ಗೊಂಡ ಶಿಬಿರದಲ್ಲಿ ನೆಲೆಸಿರುವ ನಿಖಿಲ್ ವಿಶ್ವನಾಥ್ ಈ ಬಾಲಕನಾಗಿದ್ದು ಈಗಾಗಲೇ 4 ಕನ್ನಡ ಸಾಹಿತ್ಯ ಸಮ್ಮೇಳನಗಳಲ್ಲಿ ಭಾಗವಹಿಸಿದ್ದಾನೆ. ಆತ ಓದಿದ್ದನ್ನು ನೆನಪಿನಲ್ಲಿಡುವ ಶಕ್ತಿ ಮಗನಿಗಿದೆ ಎಂದು ಬಾಲಕನ ತಂದೆ ವಿಶ್ವನಾಥ್ ಹೇಳುತ್ತಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ; Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ, Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್, KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

SCROLL FOR NEXT