ಸಂಗ್ರಹ ಚಿತ್ರ 
ರಾಜ್ಯ

ಕಲಬುರಗಿ: ಪ್ರೊಬೇಷನರಿ ಪಿಎಸ್ಐ ಅನುಮಾನಾಸ್ಪದ ಸಾವು

ನಾಗೇನಹಳ್ಳಿ ತರಬೇತಿ ಕೇಂದ್ರದಲ್ಲಿ ಪಿಎಸ್ಐ ಪ್ರಶಿಕ್ಷಣಾರ್ಥಿಯಾಗಿದ್ದ ಪಿಎಸ್ಐ ಒಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ...

ಕಲಬುರಗಿ: ನಾಗೇನಹಳ್ಳಿ ತರಬೇತಿ ಕೇಂದ್ರದಲ್ಲಿ ಪಿಎಸ್ಐ ಪ್ರಶಿಕ್ಷಣಾರ್ಥಿಯಾಗಿದ್ದ ಪಿಎಸ್ಐ ಒಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ. 
ಬಸವರಾಜ್ ಎಸ್ ಮಂಚೆನ್ನವರ್ ಸಾವನ್ನಪ್ಪಿರುವ ಪಿಎಸ್ಐ ಆಗಿದ್ದಾರೆ. ಅನಾರೋಗ್ಯ ಸಮಸ್ಯೆ ಹೇಳಿದ್ದ ಬಸವರಾಜ್ ಅವರು, ಹುಟ್ಟೂರಿಗೆ ಹೋಗಬೇಕೆಂದು ಶನಿವಾರ ರಜೆ ಪಡೆದುಕೊಂಡಿದ್ದರು. ರಜೆ ಮುಗಿದ ಬಳಿಕವೂ ವಾಪಸ್ಸಾಗದ ಹಿನ್ನಲೆಯಲ್ಲಿ ಅಧಿಕಾರಿಗಳು ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿದ್ದಾರೆ. 
ಹೊಸ ಜೆವರ್ಗಿ ರಸ್ತೆಯಲ್ಲಿ ಅನಾಮಧೇಯ ವ್ಯಕ್ತಿಯೊಬ್ಬರ ಮೃತದೇಹ ರಾಮ ಮಂದಿರದ ಬಳಿ ಬಿದ್ದಿರುವುದಾಗಿ ಅದಿಕಾರಿಗಳಿಗೆ ಕೆಲ ಸ್ಥಳೀಯರು ಹೇಳಿದ್ದಾರೆ. ಕೂಡಲೇ ಸ್ಥಳಕ್ಕ ಬಂದ ಪೊಲೀಸರು ಪರಿಶೀಲನೆ ನಡೆಸಿದಾಗ ಮೃತದೇಹ ಬಸವರಾಜ್ ಅವರದ್ದು ಎಂಬುದಾಗಿ ತಿಳಿದುಬಂದಿದೆ. 
ಮೃತದೇಹದ ಬಾಯಿಯಿಂದ ನೊರೆ ಬಂದಿರುವುದು ಕಂಡು ಬಂದಿದೆ. ಪರಿಶೀಲನೆ ನಡೆಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಬೆನಕನಹಳ್ಳಿ ಗ್ರಾಮಕ್ಕೆ ಕರೆದೊಯ್ಯಲಾಗಿದ್ದು, ಸೋಮವಾರ ಅಂತಿಮ ಸಂಸ್ಕಾರ ನಡೆಸಲಾಗಿದೆ. ಪ್ರಕರಣ ಸಂಬಂಧ ಸಚಿವ ಪ್ರಿಯಾಂಕಾ ಖರ್ಗೆಯವರು ಮೃತ ಪಿಎಸ್ಐ ಬಸವರಾಜ್ ಅವರ ಕುಟುಂಬಗಕ್ಕೆ ರೂ.50 ಸಾವಿರ ಪರಿಹಾರ ನೀಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

SCROLL FOR NEXT