ಪೂರ್ಣಕುಂಭ ಸ್ವಾಗತಕ್ಕೆ ನಿಂತ ಮಹಿಳೆಯರು 
ರಾಜ್ಯ

ಸಾಹಿತ್ಯ ಸಮ್ಮೇಳನ: ಮಹಿಳೆಯರ ಪೂರ್ಣಕುಂಭ ಮೆರವಣಿಗೆ ನಂತರ ಇದೀಗ ಸೀರೆಯ ವಿವಾದ!

ಇತ್ತೀಚೆಗೆ ಧಾರವಾಡದಲ್ಲಿ ಮುಗಿದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅತಿಥಿಗಳ ಪೂರ್ಣಕುಂಭ...

ಧಾರವಾಡ: ಇತ್ತೀಚೆಗೆ ಧಾರವಾಡದಲ್ಲಿ ಮುಗಿದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅತಿಥಿಗಳ ಪೂರ್ಣಕುಂಭ ಸ್ವಾಗತಕ್ಕೆ ನಿಂತ ಮಹಿಳೆಯರು ಧರಿಸಿದ ಸೀರೆಯ ಬಗ್ಗೆ ವಿವಾದ ಸೃಷ್ಟಿಯಾಗಿದೆ.

ಸಮ್ಮೇಳನದಲ್ಲಿ ಮಹಿಳೆಯರು ಧರಿಸಿದ 5 ಮೀಟರ್ ಗಳ ಸೀರೆಯನ್ನು ಕರ್ನಾಟಕದಿಂದ ಖರೀದಿಸುವ ಬದಲು ಸಂಘಟಕರು ಗುಜರಾತ್ ನಿಂದ ತರಿಸಿದ್ದಾರೆ ಎಂಬುದು ಆರೋಪವಾಗಿದೆ.

ಸಮ್ಮೇಳನ ಉದ್ಘಾಟನೆಯಲ್ಲಿ ಅತಿಥಿಗಳ ಪೂರ್ಣ ಕುಂಭ ಸ್ವಾಗತಕ್ಕೆ ಸುಮಾರು 1,051 ಸೀರೆಗಳನ್ನು ತರಿಸಲಾಗಿತ್ತು. ಗುಜರಾತ್ ನಲ್ಲಿ ಸುಲಭವಾಗಿ ಕಡಿಮೆ ಬೆಲೆಗೆ ಸೀರೆಗಳು ಸಿಕ್ಕಿದ ಕಾರಣ ಅಲ್ಲಿಂದ ತರಿಸಲಾಗಿದೆ ಎಂಬುದು ಸಂಘಟಕರ ಸಬೂಬಾಗಿದೆ.

ನಮ್ಮ ರಾಜ್ಯದಲ್ಲಿ ಇಳಕಲ್ ಸೀರೆಯಂತಹ ಸೀರೆಗಳನ್ನು ತಯಾರಿಸುವಾಗ ಸಂಘಟಕರು ಹೊರ ರಾಜ್ಯದಿಂದ ತರುಸುವ ಅವಶ್ಯಕತೆಯೇನಿತ್ತು? ಗಂಗಾವತಿ, ಮೈಸೂರು, ಮೊಳಕಾಲ್ಮೂರು, ಇಳಕಲ್ ಗಳಲ್ಲಿ ಉತ್ತಮ ಗುಣಮಟ್ಟದ ಸಾಂಪ್ರದಾಯಿಕ ಸೀರೆಗಳನ್ನು ತಯಾರಿಸುತ್ತಾರೆ.

ನಮ್ಮ ರಾಜ್ಯದಿಂದಲೇ ಸೀರೆ ತರಿಸಿದರೆ ಸಾಂಪ್ರದಾಯಿಕ ಸೀರೆ ಉತ್ಪಾದಕರಿಗೆ ಉದ್ಯೋಗ ಮತ್ತು ಆದಾಯ ಕೂಡ ಸೃಷ್ಟಿಯಾಗುತ್ತದೆ ಎಂದು ಕನ್ನಡಪರ ಕಾರ್ಯಕರ್ತರೊಬ್ಬರು ಹೇಳುತ್ತಾರೆ. ಇದು ಕನ್ನಡ ಸಮ್ಮೇಳನದಲ್ಲಿ ಕನ್ನಡದ ಜನತೆಗೆ ಮಾಡಿದ ಅವಮಾನ ಎಂದು ಕಾರ್ಯಕರ್ತರು, ಸಾಮಾಜಿಕ ಜಾಲತಾಣ ಬಳಕೆದಾರರು ಆರೋಪಿಸುತ್ತಾರೆ.

ಈ ಬಗ್ಗೆ ತಮಗೇನು ಗೊತ್ತಿಲ್ಲ. ಹಲವು ಸಮಿತಿಗಳು ಸೀರೆ ವಿತರಣೆಯ ಜವಾಬ್ದಾರಿ ಹೊತ್ತಿದ್ದವು ಎನ್ನುತ್ತಾರೆ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಲಿಂಗರಾಜ್ ಅಂಗಡಿ.
ಸಮಿತಿ ಸದಸ್ಯರು ಸ್ಥಳೀಯ ವ್ಯಾಪಾರಿಗಳನ್ನು ಕೇಳಿದಾಗ ಯಾರು ಕೂಡ ನಿಗದಿತ ಸಮಯಕ್ಕೆ ಸೀರೆ ನೀಡುವ ಭರವಸೆ ನೀಡಲಿಲ್ಲ. ಅಲ್ಲದೆ ಗುಜರಾತ್ ನಿಂದ ತಂದ ಸೀರೆಗಿಂತ ಬೆಲೆ ಹೆಚ್ಚಾಗಿತ್ತು ಎನ್ನುತ್ತಾರೆ ಮೆರವಣಿಗೆ ಸಮಿತಿ ಅಧ್ಯಕ್ಷ ಮತ್ತು ಪರಿಷತ್ ಸದಸ್ಯ ಶ್ರೀನಿವಾಸ್ ಮನೆ.

ಬೆಳಗಾವಿಯ ಸಗಟು ವ್ಯಾಪಾರಿಯೊಬ್ಬರು ಪ್ರತಿ ಸೀರೆಗೆ 210 ರೂಪಾಯಿಗಳಂತೆ ಹೇಳಿದರೆ ಬೇರೆಲ್ಲ ವ್ಯಾಪಾರಿಗಳು ಪ್ರತಿ ಸೀರೆಗೆ 320 ರೂಪಾಯಿ ಕೇಳಿದರು. ಅಲ್ಲದೆ ಯಾರೂ ಕೂಡ ಸಮಯಕ್ಕೆ ಸರಿಯಾಗಿ ನೀಡಬಹುದೆಂದು ಹೇಳಲಿಲ್ಲ. ಹೀಗಾಗಿ ಗುಜರಾತ್ ನಿಂದ ತರಿಸಬೇಕಾಯಿತು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT