ಸಿರ್ಸಿ ಸರ್ಕಲ್ ಮೇಲ್ಸೇತುವೆ ದುರಸ್ತಿ ಕಾರ್ಯ 
ರಾಜ್ಯ

30 ದಿನಗಳಲ್ಲಿ ಸಿರ್ಸಿ ಸರ್ಕಲ್ ಮೇಲ್ಸೇತುವೆ ಸಂಚಾರಕ್ಕೆ ಸಿದ್ಧ!

ದುರಸ್ತಿ ಕಾರ್ಯದ ನಿಮಿತ್ತ ಕಳೆದೊಂದು ವಾರದಿಂದ ಮುಚ್ಚಲ್ಪಟ್ಟಿರುವ ಸಿರ್ಸಿ ಸರ್ಕಲ್ ಮೇಲ್ಸೇತುವೆ ಇನ್ನೊಂದು ತಿಂಗಳಲ್ಲಿ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಉಪ ಮುಖ್ಯಮಂತ್ರಿ ಜಿ ಪರಮೇಶ್ವರ ಹೇಳಿದ್ದಾರೆ.

ಬೆಂಗಳೂರು: ದುರಸ್ತಿ ಕಾರ್ಯದ ನಿಮಿತ್ತ ಕಳೆದೊಂದು ವಾರದಿಂದ ಮುಚ್ಚಲ್ಪಟ್ಟಿರುವ ಸಿರ್ಸಿ ಸರ್ಕಲ್ ಮೇಲ್ಸೇತುವೆ  ಇನ್ನೊಂದು ತಿಂಗಳಲ್ಲಿ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಉಪ ಮುಖ್ಯಮಂತ್ರಿ ಜಿ ಪರಮೇಶ್ವರ ಹೇಳಿದ್ದಾರೆ.
ಮಂಗಳವಾರ ಸಿರ್ಸಿ ಸರ್ಕಲ್ ಮೇಲ್ಸೇತುವೆ ಕಾಮಕಾರಿ ಪರಿಶೀಲನೆ ನಡೆಸಿದ ಅವರು ಅಧಿಕಾರಿಗಳಿಂದ ಮಾಹಿತಿ ಪಡೆದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೇಲ್ಸೇತುವೆ ದುರಸ್ತಿ ಕಾರ್ಯ ಭರದಿಂದ ಸಾಗಿದೆ. ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಮೇಲ್ಸೇತುವೆ ಮೇಲಿನ ರಸ್ತೆಗೆ ಹೊದಿಕೆ ಹೊದಿಸಲಾಗುತ್ತಿದೆ. ಇನ್ನೊಂದು ತಿಂಗಳಲ್ಲಿ ಮೇಲ್ಸೇತುವೆ ಪ್ರಯಾಣಿಕರಿಗೆ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಹೇಳಿದರು.
'ಆಸ್ಫಾಲ್ಟಿಕೊ ಸೀಲ್ ಎಂಬ ಹೊಸ ತಂತ್ರಜ್ಞಾನವನ್ನು ಮೇಲ್ಸೇತುವೆ ದುರಸ್ತಿ ಕಾರ್ಯಕ್ಕೆ ಅಳವಡಿಸಿಕೊಳ್ಳಲಾಗಿದೆ. ಮಳೆ ಮತ್ತು ಇತರೆ ಕಾರಣಗಳಿಂದಾಗಿ ಗುಂಡಿ ಬೀಳುವ ಸಮಸ್ಯೆಗಳನ್ನು ಇದು ತಡೆಯುತ್ತದೆ. ನಗರದ ಪ್ರಮುಖ ಮೇಲ್ಸೇತುವೆ ಪ್ರಮುಖ ಹೆದ್ದಾರಿಗಳಲ್ಲಿ ಈ ತಂತ್ರಜ್ಞಾನ ಬಳಕೆ ಮಾಡಲಾಗುತ್ತಿದ್ದು, ಇದೀಗ ಸಿರ್ಸಿ ವೃತ್ತದ ಮೇಲ್ಸೇತುವೆಯಲ್ಲಿ ಈ ತಂತ್ರಜ್ಞಾನದ ಮೂಲಕ ದುರಸ್ತಿ ಕಾರ್ಯ ಮಾಡಲಾಗುತ್ತಿದೆ. ಪ್ರಯಾಣಿಕರಿಗೆ ಗುಣಮಟ್ಟದ ರಸ್ತೆ ಒದಗಿಸುವುದು ನಮ್ಮ ಗುರಿಯಾಗಿದೆ. ಖಂಡಿತಾ ಇನ್ನೊಂದು ತಿಂಗಳಲ್ಲಿ ಸಾರ್ವಜನಿಕರಿಗೆ ಈ ರಸ್ತೆ ಸಂಚಾರಕ್ಕೆ ಮುಕ್ತವಾಗಲಿದೆ ಎಂಬ ವಿಶ್ವಾಸವಿದೆ ಎಂದು ಪರಮೇಶ್ವರ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೊನೆಗೂ ನೂತನ ಸಚಿವರಿಗೆ ಖಾತೆ ಹಂಚಿಕೆ: ಅಧಿಕೃತ ಪಟ್ಟಿಗೆ ರಾಜ್ಯಪಾಲರಿಂದ ಸಹಿ; ಯಾರಿಗೆ ಯಾವ ಖಾತೆ? ಇಲ್ಲಿದೆ ಸಂಪೂರ್ಣ ಪಟ್ಟಿ

ಇಮ್ರಾನ್ ಖಾನ್ ಬದುಕಿಲ್ಲ? ಸಂಚಲನ ಮೂಡಿಸಿದ ಪಾಕಿಸ್ತಾನಿ ಪತ್ರಕರ್ತನ ಹೇಳಿಕೆ; ಜೈಲಿಗೆ ನುಗ್ಗುತ್ತೇವೆ ಎಂದ 20 ಲಕ್ಷ PTI ಕಾರ್ಯಕರ್ತರು!

'ಜಂತರ್ ಮಂತರ್ ಸೀಸನ್-2 ಶೀಘ್ರದಲ್ಲೇ ಆರಂಭ': CJP ಸಂಸ್ಥಾಪಕ ಅಭಿಜೀತ್ ದೀಪ್ಕೆ ಸ್ಫೋಟಕ ಹೇಳಿಕೆ

ಖಾಲಿ ನಿವೇಶನಗಳ ಸ್ವಚ್ಛಗೊಳಿಸುವ ಗಡುವು: ಮಾಲಿಕರಿಗೆ ಗುಡ್ ನ್ಯೂಸ್!

ಉಪ ಸಭಾಪತಿ ನೇಮಕದಲ್ಲಿ ಬಿಗ್ ಟ್ವೀಸ್ಟ್: ಅಸಮಾಧಾನ ತಣಿಸಲು ಮಂಕಾಳ ವೈದ್ಯಗೆ ಮಣೆ; ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಪೊನ್ನಣ್ಣ ನೇಮಕ