ಸಂಗ್ರಹ ಚಿತ್ರ 
ರಾಜ್ಯ

ಸುಳ್ವಾಡಿ ವಿಷ ಪ್ರಸಾದ ದುರಂತ: ಮತ್ತೆ 6 ಮಂದಿ ಆಸ್ಪತ್ರೆಗೆ ದಾಖಲು

ಚಾಮರಾಜನಗರದ ಸುಳ್ವಾಡಿ ಕಿಚ್ಚುಗತ್ತಿ ಮಾರಮ್ಮ ದೇಗುಲದ ವಿಷ ಪ್ರಸಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ 6 ಮಂದಿ ಅಸ್ವಸ್ಥರಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.

ಚಾಮರಾಜನಗರ: ಚಾಮರಾಜನಗರದ ಸುಳ್ವಾಡಿ ಕಿಚ್ಚುಗತ್ತಿ ಮಾರಮ್ಮ ದೇಗುಲದ ವಿಷ ಪ್ರಸಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ 6 ಮಂದಿ ಅಸ್ವಸ್ಥರಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.
ವಿಷಮಿಶ್ರಿತ ಪ್ರಸಾದ ದುರಂತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಸ್ವಸ್ಥಗೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದವರ ಪೈಕಿ ಈಗ ಮತ್ತೆ 6 ಮಂದಿ ಆಸ್ಪತ್ರೆಗೆ ಮರಳಿ ದಾಖಲಾಗಿದ್ದಾರೆ. ಚಾಮರಾಜನಗರ ಜಿಲ್ಲೆ ಹನೂರು ತಾಲೊಕಿನ ಎಂ.ಜಿ.ದೊಡ್ಡಿ ಗ್ರಾಮದ ಮಲ್ಲಿಗೆ, ರೇಖಾ, ಪಳನಿಯಮ್ಮ, ವೀರಮ್ಮ, ಕಮಲ ಹಾಗು ಪಳನಿಯಮ್ಮ ಎಂಬುವವರಿಗೆ ಹೊಟ್ಟೆ ಉರಿ ಕಾಣಿಸಿಕೊಂಡಿದ್ದು, ಇದೇ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 
ಸದ್ಯ ಇವರನ್ನೆಲ್ಲ ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 
ಸುಳ್ವಾಡಿ ಮಾರಮ್ಮ ದೇಗುಲದಲ್ಲಿ ಗೋಪುರ ನಿರ್ಮಾಣ ಶಂಕುಸ್ಥಾಪನೆ ಕಾರ್ಯಕ್ರಮದ ವೇಲೆ ಭಕ್ತರಿಗೆ ನೀಡಲಾಗಿದ್ದ ಪ್ರಸಾದದಲ್ಲಿ ವಿಷ ಬೆರೆಸಿದ ಪರಿಣಾಮ 20ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿ, ನೂರಾರು ಮಂದಿ ಅಸ್ವಸ್ಥರಾಗಿದ್ದರು. ಚಿಕಿತ್ಸೆ ಬಳಿಕ ಗುಣಮುಖರಾಗಿದ್ದರೂ, ಮತ್ತೆ ಪದೇ ಪದೇ ಇವರ ಪೈಕಿ ಹಲವರಲ್ಲಿ ಪದೇ ಪದೇ ಹೊಟ್ಟೆ ನೋವು, ಉರಿ ಕಾಣಿಸಿಕೊಳ್ಳುತ್ತಿದ್ದು ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT