ರಾಜ್ಯ

ಅಮಾನವೀಯ ಘಟನೆ: ಹೃದಯ ಕಾಯಿಲೆಯಿಂದ ಬಳಲುತ್ತಿದ್ದ ಮಗಳಿಗೆ ವಿಷ ಕೊಟ್ಟು ಕೊಂದ ಪಾಪಿ ತಂದೆ!

Vishwanath S
ಶಿರಸಿ: ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಮಗಳಿಗೆ ಚಿಕಿತ್ಸೆ ಕೊಡಿಸುವುದನ್ನು ಬಿಟ್ಟು ಆಕೆಗೆ ವಿಷ ಕೊಟ್ಟು ತಂದೆಯೇ ಹತ್ಯೆ ಮಾಡಿರುವ ಅಮಾನವೀಯ ಘಟನೆ ಹೆಮ್ಮಾಡಿಯ ಕುಂಬ್ರಿ ಮಜರೆಯಲ್ಲಿ ನಡೆದಿದೆ.
ಮೃತ ಬಾಲಕಿಯನ್ನು 9 ವರ್ಷದ ನಯನಾ ನಾಗರಾಜ ಪೂಜಾರಿ ಎಂದು ಗುರುತಿಸಲಾಗಿದೆ. ತಂದೆ ನಾಗರಾಜ್ ಪೂಜಾರಿ ಮಗಳಿಗೆ ವಿಷ ನೀಡಿ ಅಥವಾ ಹಲ್ಲೆ ಮಾಡಿ ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಪತ್ನಿ ಮನೆಯಲ್ಲಿ ಇಲ್ಲದಾಗ ನಾಗರಾಜ ಪೂಜಾರಿ ಈ ಕೃತ್ಯ ಎಸಗಿದ್ದು ಸಂಬಂಧಿಕರು ಬಂದ ಮೇಲೆ ಪ್ರಕರಣ ಬೆಳಕಿಗೆ ಬಂದಿದೆ. ಇನ್ನು ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
SCROLL FOR NEXT