ಮಂಗಳೂರು: ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಸೇರಿದಂತೆ ಮೂವರು ಹಿಂದೂ ಪರ ಸಂಘಟನೆಗಳ ಮುಖಂಡರ ಹತ್ಯೆಗೆ ಸಂಚು ರೂಪಿಸಿರುವ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ ನೀಡಿದೆ.
ಗುಪ್ತಚರ ಇಲಾಖೆ ಮಾಹಿತಿ ಆಧರಿಸಿ ಪೊಲೀಸರು, ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭದ್ರತೆ ನೀಡಿದ್ದಾರೆ. ಅಲ್ಲದೆ ಕೊಲೆ ಬೆದರಿಕೆ ಎದುರಿಸುತ್ತಿರುವ ವಿಶ್ವಹಿಂದೂ ಪರಿಷತ್ ಮುಖಂಡರಾದ ಜಗದೀಶ್ ಶೇಣವರಿ ಮತ್ತು ಭಜರಂಗದಳದ ಶರಣ್ ಪಂಪ್ವೆಲ್ ಅವರಿಗೆ ಎಚ್ಚರದಿಂದ ಇರುವಂತೆ ಪೊಲೀಸರು ಸೂಚಿಸಿದ್ದಾರೆ.
ಇಂದು ಬೆಂಗಳೂರಿಗೆ ರಸ್ತೆ ಮಾರ್ಗದ ಮೂಲಕ ತೆರಳಬೇಕಾಗಿದ್ದ ಪ್ರಭಾಕರ್ ಭಟ್ ಅವರು ಸುರಕ್ಷತೆಯ ದೃಷ್ಟಿಯಿಂದ ವಿಮಾನ ಮೂಲಕ ಪ್ರಯಾಣಿಸಿದ್ದಾರೆ ಎಂದು ತಿಳಿದು ಬಂದಿದೆ.
ಹತ್ಯೆಗೆ ಸಂಚು ರೂಪಿಸಿದ್ದ ಶಂಕಿತರನ್ನು ಗುಪ್ತಚರ ಇಲಾಖೆ ಬಂಧಿಸಿ ವಿಚಾರಣೆ ನಡೆಸುತ್ತಿದೆ ಎನ್ನಲಾಗಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos