ಸಾಂದರ್ಭಿಕ ಚಿತ್ರ 
ರಾಜ್ಯ

ಮಲೆಮಹದೇಶ್ವರ ಬೆಟ್ಟ ಇನ್ಮುಂದೆ ರಾಜ್ಯದ ಆರನೇ ಹುಲಿ ಸಂರಕ್ಷಣಾ ವಲಯ

ರಾಜ್ಯದಲ್ಲಿ ಹೊಸ ಅಭಯಾರಣ್ಯ, ರಕ್ಷಿತಾರಣ್ಯಗಳನ್ನು ವಿಸ್ತರಿಸಲು ರಾಜ್ಯ ಸರ್ಕಾರ ಮುಂದಾಗಿದೆ...

ಬೆಂಗಳೂರು: ರಾಜ್ಯದಲ್ಲಿ ಹೊಸ ಅಭಯಾರಣ್ಯ, ರಕ್ಷಿತಾರಣ್ಯಗಳನ್ನು ವಿಸ್ತರಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಮಲೆಮಹದೇಶ್ವರ ಬೆಟ್ಟದ ವನ್ಯಮೃಗ ಅಭಯಾರಣ್ಯಕ್ಕೆ ಕೊನೆಗೂ ಹುಲಿ ಮೀಸಲು ಅರಣ್ಯ ಎಂದು ಘೋಷಿಸಲಗಿದ್ದು, ರಾಜ್ಯದಲ್ಲಿ ಇದು ಆರನೇ ಹುಲಿ ಅಭಯಾರಣ್ಯವಾಗಿದೆ. ಮುಖ್ಯಮಂತ್ರಿ ನೇತೃತ್ವದಲ್ಲಿ ನಿನ್ನೆ ಸಭೆ ಸೇರಿದ ಕರ್ನಾಟಕ ವನ್ಯಮೃಗ ಮಂಡಳಿ ಸದಸ್ಯರು ಈ ನಿರ್ಧಾರಕ್ಕೆ ಬಂದಿದ್ದಾರೆ. ಸಭೆಯಲ್ಲಿ ಹುಬ್ಬಳ್ಳಿ-ಅಂಕೋಲ ರೈಲ್ವೆ ಯೋಜನೆ ಕುರಿತು ನಿರ್ಧಾರವನ್ನು ಮುಂದೂಡಲಾಯಿತು.

ಹುಬ್ಬಳ್ಳಿ-ಅಂಕೋಲಾ ರೈಲ್ವೆ ಯೋಜನೆಗೆ ಮಂಡಳಿಯ ಸದಸ್ಯರಿಂದ ಸಂಪೂರ್ಣ ವಿರೋಧವಿದೆ. ಅಂತಿಮ ನಿರ್ಧಾರ ಕೈಗೊಳ್ಳುವ ಮುನ್ನ ಇಂತಹ ಮೂಲಭೂತ ಯೋಜನೆಯನ್ನು ಸರಿಯಾಗಿ ಅಧ್ಯಯನ ಮಾಡಬೇಕು. ಎರಡು ದಶಕಗಳ ರೈಲ್ವೆ ಯೋಜನೆಗೆ ಹಲವು ಹಂತಗಳಲ್ಲಿ  ವಿರೋಧ ಕೇಳಿಬರುತ್ತಲೇ ಇದೆ, ಪ್ರಾಕೃತಿಕ ಸಂಪತ್ತು ಮತ್ತು ವನ್ಯಜೀವಿಗಳಿಗೆ ಧಕ್ಕೆಯುಂಟಾಗುತ್ತದೆ ಎಂಬುದು ಪರಿಸರ ಪ್ರಿಯರ ಮತ್ತು ಮಂಡಳಿ ಸದಸ್ಯರ ವಾದವಾಗಿದೆ.

ಮಾನವ ಪ್ರಾಣಿ ಸಂಘರ್ಷದಿಂದ ಉಂಟಾಗುವ ಅನಾಹುತಕ್ಕೆ ಪರಿಹಾರ ಮೊತ್ತವನ್ನು 5 ಲಕ್ಷದಿಂದ 10 ಲಕ್ಷ ರೂಪಾಯಿಗಳಿಗೆ ಸದ್ಯದಲ್ಲಿಯೇ ಏರಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

ರಾಜ್ಯದಲ್ಲಿ ಈಗಾಗಲೇ ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ, ತುಮಕೂರಿನ ಮಾಲೂರು-ಕಾಮಸಮುದ್ರ ವನ್ಯಜೀವಿ ಅಭಯಾರಣ್ಯ ಚಿಂಕರಾಗಳಿಗೆ, ಕೋಲಾರದ ಮುಳಬಾಗಿಲು ಬಾವಲಿಗಳಿಗೆ, ಚಿರತೆ, ಕರಡಿ ಮತ್ತು ಆನೆ ಕಾರಿಡಾರಿಗೆ ಮಂಡಳಿಯಿಂದ ಒಪ್ಪಿಗೆ ಪಡೆಯಲಾಯಿತು.ಕಾವೇರಿ ವನ್ಯಜೀವಿ ಅಭಯಾರಣ್ಯದ ಪಕ್ಕದಲ್ಲಿ ಮುನೀಶ್ವರ ಅರಣ್ಯ ಪ್ರದೇಶವನ್ನು ಕೂಡ ಸೇರಿಸಲಾಗಿದೆ. 32 ಸಾವಿರ ಎಕರೆಯ ಪರ್ವತ ಪ್ರದೇಶವಾದ ಕಪ್ಪಟಗುಡ್ಡ ಮೀಸಲು ಅರಣ್ಯವನ್ನು ಕೂಡ ವನ್ಯಜೀವಿ ಅಭಯಾರಣ್ಯಗಳಿಗೆ ಸೇರಿಸಲಾಗಿದೆ.
ಶರಾವತಿ ಕಣಿವೆ ವನ್ಯಜೀವಿ ಅಭಯಾರಣ್ಯ ಮತ್ತು ಗುಡೆಕೋಟೆ ಅಭಯಾರಣ್ಯವನ್ನು ವಿಸ್ತರಿಸಲು ಅನುಮೋದನೆ ನೀಡಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT