ಸ್ಟೆನೊಗ್ರಾಫರ್ ಮೋಹನ್ 
ರಾಜ್ಯ

ವಿಧಾನ ಸೌಧದಲ್ಲಿ ನಗದು ವಶ: ಸಚಿವರನ್ನು ಎಸಿಬಿ ತನಿಖೆ ನಡೆಸುವ ಸಾಧ್ಯತೆ

ವಿಧಾನಸೌಧದಲ್ಲಿ ಸೂಕ್ತ ದಾಖಲೆಗಳಲ್ಲದ ನಗದು ಸಿಕ್ಕಿದ ಪ್ರಕರಣ ನಂತರ ಸ್ಟೆನೊಗ್ರಾಫರ್ ಮೋಹನ್ ...

ಬೆಂಗಳೂರು: ವಿಧಾನಸೌಧದಲ್ಲಿ ಸೂಕ್ತ ದಾಖಲೆಗಳಲ್ಲದ ನಗದು ಸಿಕ್ಕಿದ ಪ್ರಕರಣ ನಂತರ ಸ್ಟೆನೊಗ್ರಾಫರ್ ಮೋಹನ್ ಕುಮಾರ್ ಮಾಡಿರುವ ತಪ್ಪೊಪ್ಪಿಗೆ ಮತ್ತು ಹೇಳಿಕೆ ಹಿನ್ನಲೆಯಲ್ಲಿ ಭ್ರಷ್ಟಾಚಾರ ನಿಯಂತ್ರಣ ಇಲಾಖೆ ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಸಿ ಪುಟ್ಟರಂಗ ಶೆಟ್ಟಿ ಅವರನ್ನು ತನಿಖೆ ಮಾಡುವ ಸಾಧ್ಯತೆಯಿದೆ.

ಅಧಿಕಾರಿಗಳು ನಗದು ಸಿಕ್ಕಿದ ಹಿಂದಿನ ಸಾಕ್ಷಿಗಳನ್ನು ಸಂಗ್ರಹಿಸಲು ಯತ್ನಿಸುತ್ತಿದ್ದು ಇತರ ಆರೋಪಿಗಳನ್ನು ಕೂಡ ಸದ್ಯದಲ್ಲಿಯೇ ವಿಚಾರಣೆಗೊಳಪಡಿಸಲಿದ್ದಾರೆ.

ನಿನ್ನೆ ಮೋಹನ್ ನನ್ನು ಎಸಿಬಿ ಕಸ್ಟಡಿಗೆ ಒಪ್ಪಿಸಿದ ನಂತರ ಅಧಿಕಾರಿಗಳು ಇದೀಗ ಮೋಹನ್ ನ ಮೊಬೈಲ್ ಫೋನ್ ಪಡೆಯಲು ನ್ಯಾಯಾಲಯದ ಅನುಮತಿಗಾಗಿ ಕಾಯುತ್ತಿದ್ದಾರೆ ಎಂದು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಗೆ ಮಾಹಿತಿ ಸಿಕ್ಕಿದೆ. ಆ ಮೂಲಕ ಆತ ಯಾರ ಸಂಪರ್ಕದಲ್ಲಿ ಇದ್ದ ಎಂದು ತಿಳಿದುಬರಲಿದೆ.

ಮೋಹನ್ ಬಳಿಯಿದ್ದ ಹಣವನ್ನು ವಿವಿಧ ಮೂಲಗಳಿಂದ ಪಡೆದುದು ಎಂದು ತಿಳಿದುಬಂದಿದೆ.  ಎರಡು ಕಡೆಗಳಿಂದ ಮೋಹನ್ ಖುದ್ದಾಗಿ ಹೋಗಿ ನಗದು ಸ್ವೀಕರಿಸಿ ತಂದಿದ್ದು ಮತ್ತಿಬ್ಬರು 8 ಲಕ್ಷ ರೂಪಾಯಿ ನಗದು ಪಡೆದುಕೊಂಡು ವಿಧಾನ ಸೌಧಕ್ಕೆ ಬಂದಿದ್ದರು ಎಂದು ಸಹ ತಿಳಿದುಬಂದಿದೆ. ಅನಂತ್ ಶಂಕರ್ ಎಂಬುವವನು 3.6 ಲಕ್ಷ ನಗದಿನೊಂದಿಗೆ ವಿಧಾನಸೌಧದ ಕಚೇರಿಗೆ ಬಂದಿದ್ದರೆ ಮತ್ತೊಬ್ಬ ಕೃಷ್ಣಮೂರ್ತಿ ಎಂಬಾತ 4.26 ಲಕ್ಷ ನಗದಿನೊಂದಿಗೆ ಬಂದಿದ್ದಾನೆ ಎಂದು ಮೂಲಗಳಿಂದ ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT