ಸ್ಟೆನೊಗ್ರಾಫರ್ ಮೋಹನ್ 
ರಾಜ್ಯ

ವಿಧಾನ ಸೌಧದಲ್ಲಿ ನಗದು ವಶ: ಸಚಿವರನ್ನು ಎಸಿಬಿ ತನಿಖೆ ನಡೆಸುವ ಸಾಧ್ಯತೆ

ವಿಧಾನಸೌಧದಲ್ಲಿ ಸೂಕ್ತ ದಾಖಲೆಗಳಲ್ಲದ ನಗದು ಸಿಕ್ಕಿದ ಪ್ರಕರಣ ನಂತರ ಸ್ಟೆನೊಗ್ರಾಫರ್ ಮೋಹನ್ ...

ಬೆಂಗಳೂರು: ವಿಧಾನಸೌಧದಲ್ಲಿ ಸೂಕ್ತ ದಾಖಲೆಗಳಲ್ಲದ ನಗದು ಸಿಕ್ಕಿದ ಪ್ರಕರಣ ನಂತರ ಸ್ಟೆನೊಗ್ರಾಫರ್ ಮೋಹನ್ ಕುಮಾರ್ ಮಾಡಿರುವ ತಪ್ಪೊಪ್ಪಿಗೆ ಮತ್ತು ಹೇಳಿಕೆ ಹಿನ್ನಲೆಯಲ್ಲಿ ಭ್ರಷ್ಟಾಚಾರ ನಿಯಂತ್ರಣ ಇಲಾಖೆ ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಸಿ ಪುಟ್ಟರಂಗ ಶೆಟ್ಟಿ ಅವರನ್ನು ತನಿಖೆ ಮಾಡುವ ಸಾಧ್ಯತೆಯಿದೆ.

ಅಧಿಕಾರಿಗಳು ನಗದು ಸಿಕ್ಕಿದ ಹಿಂದಿನ ಸಾಕ್ಷಿಗಳನ್ನು ಸಂಗ್ರಹಿಸಲು ಯತ್ನಿಸುತ್ತಿದ್ದು ಇತರ ಆರೋಪಿಗಳನ್ನು ಕೂಡ ಸದ್ಯದಲ್ಲಿಯೇ ವಿಚಾರಣೆಗೊಳಪಡಿಸಲಿದ್ದಾರೆ.

ನಿನ್ನೆ ಮೋಹನ್ ನನ್ನು ಎಸಿಬಿ ಕಸ್ಟಡಿಗೆ ಒಪ್ಪಿಸಿದ ನಂತರ ಅಧಿಕಾರಿಗಳು ಇದೀಗ ಮೋಹನ್ ನ ಮೊಬೈಲ್ ಫೋನ್ ಪಡೆಯಲು ನ್ಯಾಯಾಲಯದ ಅನುಮತಿಗಾಗಿ ಕಾಯುತ್ತಿದ್ದಾರೆ ಎಂದು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಗೆ ಮಾಹಿತಿ ಸಿಕ್ಕಿದೆ. ಆ ಮೂಲಕ ಆತ ಯಾರ ಸಂಪರ್ಕದಲ್ಲಿ ಇದ್ದ ಎಂದು ತಿಳಿದುಬರಲಿದೆ.

ಮೋಹನ್ ಬಳಿಯಿದ್ದ ಹಣವನ್ನು ವಿವಿಧ ಮೂಲಗಳಿಂದ ಪಡೆದುದು ಎಂದು ತಿಳಿದುಬಂದಿದೆ.  ಎರಡು ಕಡೆಗಳಿಂದ ಮೋಹನ್ ಖುದ್ದಾಗಿ ಹೋಗಿ ನಗದು ಸ್ವೀಕರಿಸಿ ತಂದಿದ್ದು ಮತ್ತಿಬ್ಬರು 8 ಲಕ್ಷ ರೂಪಾಯಿ ನಗದು ಪಡೆದುಕೊಂಡು ವಿಧಾನ ಸೌಧಕ್ಕೆ ಬಂದಿದ್ದರು ಎಂದು ಸಹ ತಿಳಿದುಬಂದಿದೆ. ಅನಂತ್ ಶಂಕರ್ ಎಂಬುವವನು 3.6 ಲಕ್ಷ ನಗದಿನೊಂದಿಗೆ ವಿಧಾನಸೌಧದ ಕಚೇರಿಗೆ ಬಂದಿದ್ದರೆ ಮತ್ತೊಬ್ಬ ಕೃಷ್ಣಮೂರ್ತಿ ಎಂಬಾತ 4.26 ಲಕ್ಷ ನಗದಿನೊಂದಿಗೆ ಬಂದಿದ್ದಾನೆ ಎಂದು ಮೂಲಗಳಿಂದ ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT