ಪ್ರಯಾಣಿಕನಿಗೆ ಚಿನ್ನವಿದ್ದ ಬ್ಯಾಗ್ ಹಿಂತಿರುಗಿಸಿದ್ದ ನಿರ್ವಾಹಕನಿಗೆ ಕೆಸ್ಸಾರ್ಟಿಸಿ ಗೌರವ 
ರಾಜ್ಯ

ಪ್ರಯಾಣಿಕನಿಗೆ ಚಿನ್ನವಿದ್ದ ಬ್ಯಾಗ್ ಹಿಂತಿರುಗಿಸಿದ್ದ ನಿರ್ವಾಹಕನಿಗೆ ಕೆಸ್ಸಾರ್ಟಿಸಿ ಗೌರವ

ಬಸ್ ಪ್ರಯಾಣಿಕನೊಬ್ಬ ಬಸ್ ನಲ್ಲೇ ಬಿಟ್ಟು ಹೋಗಿದ್ದ ಬೆಲೆಬಾಳುವ ವಸ್ತುಗಳು, ನಗದು ಇದ್ದ ಬ್ಯಾಗ್ ಅನ್ನು ಬಸ್ ನಿರ್ವಾಹಕ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು: ಬಸ್ ಪ್ರಯಾಣಿಕನೊಬ್ಬ ಬಸ್ ನಲ್ಲೇ ಬಿಟ್ಟು ಹೋಗಿದ್ದ ಬೆಲೆಬಾಳುವ ವಸ್ತುಗಳು, ನಗದು ಇದ್ದ ಬ್ಯಾಗ್ ಅನ್ನು ಬಸ್ ನಿರ್ವಾಹಕ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ನಿರ್ವಾಹಕ ಆರ್. ಶ್ರೀಧರ್ ಹೀಗೆ ಪ್ರಾಮಾಣಿಕತೆ ತೋರಿದ ವ್ಯಕ್ತಿಯಾಗಿದ್ದು ಈತನಿಗೆ `5,000 ನಗದು ಪ್ರಶಸ್ತಿ ಮತ್ತು  ಮೆಚ್ಚುಗೆ ಪತ್ರ ನೀಡಿ ಗೌರವಿಸಲಾಗಿದೆ. ಪ್ರಯಾಣಿಕ ಬಿಟ್ಟಿದ್ದ ಚೀಲದಲ್ಲಿ `6 ಲಕ್ಷ  ಮೌಲ್ಯದ ಚಿನ್ನ ಹಾಗೂ ನಗದು ಇತ್ತು.
ಚಿತ್ರದುರ್ಗ ವಿಭಾಗದ ಶಿರಾ ಕೆಎಸ್ಆರ್ಟಿಸಿ ಡಿಪೋ ಬಸ್ ನಿರ್ವಾಹಕನಾಗಿರುವ ಶ್ರೀಧರ್ ಮಂಗಳವಾರಶಿರಾ-ಬೆಂಗಳೂರು -ಪಾವಗಡ ಮಾರ್ಗದಲ್ಲಿ ಕರ್ತವ್ಯದಲ್ಲಿದ್ದರು. ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣಕ್ಕೆ ತಲುಪಿದಾಗ, ಅವರು ಬಸ್ಸಿನಲ್ಲಿ ವಾರಸುದಾರರಿಲ್ಲದ ಬ್ಯಾಗ್ ಒಂದನ್ನು ಪತ್ತೆ ಮಾಡಿದ್ದಾರೆ.ಆಗ ಅವರು ತಕ್ಷಣ ತನ್ನ ಡಿಪೋ ಮ್ಯಾನೇಜರ್ ಗೆ ವಿಚಾರ ತಿಳಿಸಿದ್ದ ಶ್ರೀಧರ್ ಡಿಪೋ ಮ್ಯಾನೇಜರ್ ಮುಖಾಂತರ ಆ ಬ್ಯಾಗ್ ಅನ್ನು ವಾರಸುದಾರೈಗೆ ಹಿಂತಿರುಗಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT