ರಕ್ತದಲ್ಲಿ ಪತ್ರ ಬರೆದ ಯುವಕ ವಿಜಯ್ ರಂಜನ್ 
ರಾಜ್ಯ

ರಕ್ತದಲ್ಲಿ ಪತ್ರ ಬರೆದ ವಿಜಯಪುರ ಯುವಕ: 2 ತಿಂಗಳಾದರೂ ಸಿಎಂರಿಂದ ಬಂದಿಲ್ಲ ಪ್ರತಿಕ್ರಿಯೆ

ತನ್ನೂರಲ್ಲಿ ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸಬೇಕೆಂದು 26 ವರ್ಷದ ಯುವಕ ತನ್ನ ರಕ್ತದಲ್ಲಿ 10 ಪುಟಗಳ ...

ವಿಜಯಪುರ: ತನ್ನೂರಲ್ಲಿ ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸಬೇಕೆಂದು 26 ವರ್ಷದ ಯುವಕ ತನ್ನ ರಕ್ತದಲ್ಲಿ 10 ಪುಟಗಳ ಪತ್ರ ಬರೆದು ಮುಖ್ಯಮಂತ್ರಿಗಳಿಗೆ ಕಳುಹಿಸಿದ ಪತ್ರಕ್ಕೆ ಇದುವರೆಗೆ ಪ್ರತಿಕ್ರಿಯೆ ಬಂದಿಲ್ಲ.

ವಿಜಯಪುರ ಜಿಲ್ಲೆಯ ಮುದ್ದೆಬಿಹಾಳ ತಾಲ್ಲೂಕಿನ ನಲ್ಟ್ ವಾಡ್ ಗ್ರಾಮದ ವಿಜಯ್ ರಂಜನ್ ಜೋಶಿ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದು ಮುಖ್ಯಮಂತ್ರಿ, ಶಿಕ್ಷಣ ಸಚಿವರು, ಮುದ್ದೆಬಿಹಾಳ ಶಾಸಕರು ಮತ್ತು ಜಿಲ್ಲಾಧಿಕಾರಿಗಳಿಗೆ ಕಳೆದ ನವೆಂಬರ್ 10ರಂದು ತನ್ನ ರಕ್ತದಲ್ಲಿ ಪತ್ರ ಬರೆದು ಕಳುಹಿಸಿದ್ದರು. ಆದರೆ ಎರಡು ತಿಂಗಳುಗಳು ಕಳೆದರೂ ಸಹ ಮುಖ್ಯಮಂತ್ರಿಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ತನ್ನ ಗೆಳೆಯನ ಸಹಾಯ ಪಡೆದು ಸಿರಿಂಜ್ ತರಿಸಿ ರಕ್ತವನ್ನು ತೆಗೆದು ಅದರಿಂದ 10 ಪುಟಗಳ ಪತ್ರವನ್ನು ವಿಜಯ್ ರಂಜನ್ ಬರೆದಿದ್ದರು. ನಲ್ಟ್ ವಾಡದಲ್ಲಿ ತಕ್ಷಣವೇ ಸರ್ಕಾರಿ ಹೈಸ್ಕೂಲ್, ಡಿಗ್ರಿ ಕಾಲೇಜುಗಳನ್ನು ತೆರೆಯಬೇಕು. ಇಲ್ಲಿ 25 ಸಾವಿರಕ್ಕೂ ಹೆಚ್ಚು ಜನಸಂಖ್ಯೆಯಿದ್ದು ಇದರಿಂದ ಜನತೆಗೆ ಅನುಕೂಲವಾಗಲಿದೆ ಎಂದು ಜೋಶಿ ಪತ್ರದಲ್ಲಿ ವಿವರಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Madhya Pradesh: ದುರ್ಗಾದೇವಿ ಮೂರ್ತಿ ವಿಸರ್ಜನೆ ವೇಳೆ ದುರಂತ, ಮಹಿಳೆಯರು, ಮಕ್ಕಳು ಸೇರಿದಂತೆ 14 ಮಂದಿ ಸಾವು!Video

ಈ ಬಾರಿ 'ಮೈಸೂರು ದಸರಾ' ಯಶಸ್ವಿ; ಬೆಳೆ ಹಾನಿಯಾದ ಎಲ್ಲ 10 ಲಕ್ಷ ಹೆಕ್ಟೇರ್ ಗೂ ಸಮೀಕ್ಷೆ ನಂತರ ಪರಿಹಾರ: ಸಿಎಂ ಸಿದ್ದರಾಮಯ್ಯ

'RSS ನಲ್ಲಿ ಒಬ್ಬ ವ್ಯಕ್ತಿಯೂ ಇಲ್ಲ': ಪ್ರಧಾನಿ ಮೋದಿ ಹೇಳಿಕೆಗೆ ಓವೈಸಿ ತಿರುಗೇಟು!

2026 T20 World Cup: ಅರ್ಹತೆ ಪಡೆದ ನಮೀಬಿಯಾ, ಜಿಂಬಾಬ್ವೆ!

ಅಂಬೇಡ್ಕರ್ ಸಿದ್ಧಾಂತದಂತೆ ಬದುಕಿದ್ದೇವೆ; RSS ಕಾರ್ಯಕ್ರಮಕ್ಕೆ ಹೋಗಲ್ಲ: CJI ಗವಾಯಿ ತಾಯಿ ಪತ್ರ

SCROLL FOR NEXT