ರಕ್ತದಲ್ಲಿ ಪತ್ರ ಬರೆದ ಯುವಕ ವಿಜಯ್ ರಂಜನ್ 
ರಾಜ್ಯ

ರಕ್ತದಲ್ಲಿ ಪತ್ರ ಬರೆದ ವಿಜಯಪುರ ಯುವಕ: 2 ತಿಂಗಳಾದರೂ ಸಿಎಂರಿಂದ ಬಂದಿಲ್ಲ ಪ್ರತಿಕ್ರಿಯೆ

ತನ್ನೂರಲ್ಲಿ ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸಬೇಕೆಂದು 26 ವರ್ಷದ ಯುವಕ ತನ್ನ ರಕ್ತದಲ್ಲಿ 10 ಪುಟಗಳ ...

ವಿಜಯಪುರ: ತನ್ನೂರಲ್ಲಿ ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸಬೇಕೆಂದು 26 ವರ್ಷದ ಯುವಕ ತನ್ನ ರಕ್ತದಲ್ಲಿ 10 ಪುಟಗಳ ಪತ್ರ ಬರೆದು ಮುಖ್ಯಮಂತ್ರಿಗಳಿಗೆ ಕಳುಹಿಸಿದ ಪತ್ರಕ್ಕೆ ಇದುವರೆಗೆ ಪ್ರತಿಕ್ರಿಯೆ ಬಂದಿಲ್ಲ.

ವಿಜಯಪುರ ಜಿಲ್ಲೆಯ ಮುದ್ದೆಬಿಹಾಳ ತಾಲ್ಲೂಕಿನ ನಲ್ಟ್ ವಾಡ್ ಗ್ರಾಮದ ವಿಜಯ್ ರಂಜನ್ ಜೋಶಿ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದು ಮುಖ್ಯಮಂತ್ರಿ, ಶಿಕ್ಷಣ ಸಚಿವರು, ಮುದ್ದೆಬಿಹಾಳ ಶಾಸಕರು ಮತ್ತು ಜಿಲ್ಲಾಧಿಕಾರಿಗಳಿಗೆ ಕಳೆದ ನವೆಂಬರ್ 10ರಂದು ತನ್ನ ರಕ್ತದಲ್ಲಿ ಪತ್ರ ಬರೆದು ಕಳುಹಿಸಿದ್ದರು. ಆದರೆ ಎರಡು ತಿಂಗಳುಗಳು ಕಳೆದರೂ ಸಹ ಮುಖ್ಯಮಂತ್ರಿಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ತನ್ನ ಗೆಳೆಯನ ಸಹಾಯ ಪಡೆದು ಸಿರಿಂಜ್ ತರಿಸಿ ರಕ್ತವನ್ನು ತೆಗೆದು ಅದರಿಂದ 10 ಪುಟಗಳ ಪತ್ರವನ್ನು ವಿಜಯ್ ರಂಜನ್ ಬರೆದಿದ್ದರು. ನಲ್ಟ್ ವಾಡದಲ್ಲಿ ತಕ್ಷಣವೇ ಸರ್ಕಾರಿ ಹೈಸ್ಕೂಲ್, ಡಿಗ್ರಿ ಕಾಲೇಜುಗಳನ್ನು ತೆರೆಯಬೇಕು. ಇಲ್ಲಿ 25 ಸಾವಿರಕ್ಕೂ ಹೆಚ್ಚು ಜನಸಂಖ್ಯೆಯಿದ್ದು ಇದರಿಂದ ಜನತೆಗೆ ಅನುಕೂಲವಾಗಲಿದೆ ಎಂದು ಜೋಶಿ ಪತ್ರದಲ್ಲಿ ವಿವರಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೇಶವಿರೋಧಿ ಚಟುವಟಿಕೆ ಆರೋಪ: ಕಾಶ್ಮೀರ ಟೈಮ್ಸ್ ದಿನಪತ್ರಿಕೆ ಕಚೇರಿಯ SIA ದಾಳಿ; Ak-47 ಕಾರ್ಟ್ರಿಡ್ಜ್‌, ಗ್ರೆನೇಡ್ ಲಿವರ್‌ ವಶಕ್ಕೆ!

ರೋಚಕ ಘಟ್ಟ ತಲುಪಿದ 'ಸಿಎಂ ಬದಲಾವಣೆ' ಚರ್ಚೆ: ಡಿಕೆಶಿ ಪರ ಶಾಸಕರು ದಿಢೀರ್ ದೆಹಲಿ ಯಾತ್ರೆ; ಹೈಕಮಾಂಡ್ ಮುಂದೆ ಶಕ್ತಿ ಪ್ರದರ್ಶನಕ್ಕೆ ಸಜ್ಜು!

ಅಕ್ರಮ ವಲಸಿಗರಿಗೆ ಅಸ್ಸಾಂ ಸರ್ಕಾರದ 'ಶಾಕ್': 'ಅತ್ಯಪರೂಪದ ಕಾನೂನು' ಜಾರಿ, 24 ಗಂಟೆಯೊಳಗೆ ಗಡಿಪಾರು!

"ಕೆಲಸದ ಹೊರೆ ನಿರ್ವಹಣೆ ಅಗತ್ಯವಿದ್ದರೆ, IPL ಬಿಡಿ": ಶುಭ್‌ಮನ್ ಗಿಲ್‌ಗೆ ಖಡಕ್ ಸಂದೇಶ!

ಭಾರತದ ಬೆನ್ನಿಗೆ ಚೂರಿ?: ದೆಹಲಿ ಬಾಂಬ್ ಸ್ಫೋಟಕ್ಕೂ ಅಫ್ಘಾನಿಸ್ತಾನಕ್ಕೂ ನಂಟು ಬಹಿರಂಗ; ಕರ್ನಾಟಕಕ್ಕೂ ಉಗ್ರನ ಭೇಟಿ!

SCROLL FOR NEXT