ನಾರಾಯಣ ರೆಡ್ಡಿ 
ರಾಜ್ಯ

ವಿದೇಶಗಳಲ್ಲೂ ಖ್ಯಾತಿ ಗಳಿಸಿದ್ದ ಸಾವಯವ ಕೃಷಿಕ, ನಾಡೋಜ ನಾರಾಯಣ ರೆಡ್ಡಿ ನಿಧನ: ಸಿಎಂ ಸಂತಾಪ

ಸಾವಯಕ ಕೃಷಿಯಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿದ್ದ, ಬೆಂಗಳೂರಿನ ನಿವಾಸಿ ಸಾವಯವ ಕೃಷಿಕ ನಾಡೋಜ ನಾರಾಯಣ ರೆಡ್ಡಿ (80) ನಿಧನರಾಗಿದ್ದಾರೆ.

ಬೆಂಗಳೂರು: ಸಾವಯಕ ಕೃಷಿಯಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿದ್ದ, ಬೆಂಗಳೂರಿನ ನಿವಾಸಿ ಸಾವಯವ ಕೃಷಿಕ ನಾಡೋಜ ನಾರಾಯಣ ರೆಡ್ಡಿ (80) ನಿಧನರಾಗಿದ್ದಾರೆ. 
ರಾಜ್ಯಮಟ್ಟದ ಪತ್ರಿಕೆಗಳಲ್ಲಿ ಕೃಷಿ ಸಂಬಂಧಿತ ಸಮಸ್ಯೆಗಳಿಗೆ ಸರಳ ಪರಿಹಾರವನ್ನೂ ನಾರಾಯಣ ರೆಡ್ಡಿ ಸೂಚಿಸುತ್ತಿದ್ದರು. ಕೃಷಿ ಕ್ಷೇತ್ರದಲ್ಲಿ ಕೆಲವು ಇತ್ತೀಚಿನ  ಪದ್ಧತಿಗಳನ್ನು ನಾರಾಯಣ ರೆಡ್ಡಿ ಕಟುವಾಗಿ ಟೀಕಿಸುತ್ತಿದ್ದರು. 
ಮೂವರು ಗಂಡುಮಕ್ಕಳು ಹಾಗೂಪತ್ನಿಯನ್ನು ಅಗಲಿರುವ ನಾರಾಯಣ ರೆಡ್ಡಿ ಅವರ ಅಂತ್ಯ ಸಂಸ್ಕಾರ ಜ.14 ರಂದು ಮಧ್ಯಾಹ್ನ ನಡೆಯಲಿದೆ. ಹೋಟೆಲ್​ನಲ್ಲಿ ಕ್ಲೀನರ್​ ಆಗಿ ಕೆಲಸ ಮಾಡುತ್ತಿದ್ದ ನಾರಾಯಣ ರೆಡ್ಡಿ, ಆ ನಂತರ ಲಾರಿ ಆಫೀಸಿನಲ್ಲಿ ಪ್ಯೂನ್ ಕೆಲಸಕ್ಕೆ ಸೇರಿಕೊಂಡು, ಅಲ್ಲಿ ಗುಮಾಸ್ತನಾಗಿ, ಮ್ಯಾನೇಜರ್ ಆಗಿ ಕೆಲಸಮಾಡಿದ್ದರು. ನಂತರ 1972 ರಲ್ಲಿ ಮರಳೇನಹಳ್ಳಿ ಬಳಿ ಜಮೀನು ಖರೀದಿಸಿ ಅಲ್ಲಿ ಸಾವಯವ ಕೃಷಿ ಪ್ರಾರಂಭಿಸಿದ್ದರು. 
ಸಾವಯವ ಕೃಷಿಗೆ ಸಂಬಂಧಿಸಿದಂತೆ ಅಪಾರ ಜ್ಞಾನವನ್ನು ಹೊಂದಿದ್ದ ನಾರಾಯಣ ರೆಡ್ಡಿ ಅವರು ಜಪಾನ್​ನ ವಿಶ್ವವಿಖ್ಯಾತ ರೈತ ಫುಕುವೋಕಾ ಅವರ ವಿಚಾರಗಳಿಂದ ಪ್ರೇರಿತರಾಗಿ, ರಾಸಾಯನಿಕ ರಹಿತವಾಗಿ ಸಂಪೂರ್ಣವಾಗಿ ಸಾವಯವ ಪದ್ಧತಿಯನ್ನು ಅಳವಡಿಸಿಕೊಂಡು ಅದರಲ್ಲಿ ಯಶಸ್ಸು ಕಂಡಿದ್ದರು.  ಸಾವಯವ ಕೃಷಿ ತಜ್ಞ ನಾರಾಯಣ ರೆಡ್ಡಿ ನಿಧನಕ್ಕೆ ಸಿಎಂ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT