ನಾರಾಯಣ ರೆಡ್ಡಿ 
ರಾಜ್ಯ

ವಿದೇಶಗಳಲ್ಲೂ ಖ್ಯಾತಿ ಗಳಿಸಿದ್ದ ಸಾವಯವ ಕೃಷಿಕ, ನಾಡೋಜ ನಾರಾಯಣ ರೆಡ್ಡಿ ನಿಧನ: ಸಿಎಂ ಸಂತಾಪ

ಸಾವಯಕ ಕೃಷಿಯಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿದ್ದ, ಬೆಂಗಳೂರಿನ ನಿವಾಸಿ ಸಾವಯವ ಕೃಷಿಕ ನಾಡೋಜ ನಾರಾಯಣ ರೆಡ್ಡಿ (80) ನಿಧನರಾಗಿದ್ದಾರೆ.

ಬೆಂಗಳೂರು: ಸಾವಯಕ ಕೃಷಿಯಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿದ್ದ, ಬೆಂಗಳೂರಿನ ನಿವಾಸಿ ಸಾವಯವ ಕೃಷಿಕ ನಾಡೋಜ ನಾರಾಯಣ ರೆಡ್ಡಿ (80) ನಿಧನರಾಗಿದ್ದಾರೆ. 
ರಾಜ್ಯಮಟ್ಟದ ಪತ್ರಿಕೆಗಳಲ್ಲಿ ಕೃಷಿ ಸಂಬಂಧಿತ ಸಮಸ್ಯೆಗಳಿಗೆ ಸರಳ ಪರಿಹಾರವನ್ನೂ ನಾರಾಯಣ ರೆಡ್ಡಿ ಸೂಚಿಸುತ್ತಿದ್ದರು. ಕೃಷಿ ಕ್ಷೇತ್ರದಲ್ಲಿ ಕೆಲವು ಇತ್ತೀಚಿನ  ಪದ್ಧತಿಗಳನ್ನು ನಾರಾಯಣ ರೆಡ್ಡಿ ಕಟುವಾಗಿ ಟೀಕಿಸುತ್ತಿದ್ದರು. 
ಮೂವರು ಗಂಡುಮಕ್ಕಳು ಹಾಗೂಪತ್ನಿಯನ್ನು ಅಗಲಿರುವ ನಾರಾಯಣ ರೆಡ್ಡಿ ಅವರ ಅಂತ್ಯ ಸಂಸ್ಕಾರ ಜ.14 ರಂದು ಮಧ್ಯಾಹ್ನ ನಡೆಯಲಿದೆ. ಹೋಟೆಲ್​ನಲ್ಲಿ ಕ್ಲೀನರ್​ ಆಗಿ ಕೆಲಸ ಮಾಡುತ್ತಿದ್ದ ನಾರಾಯಣ ರೆಡ್ಡಿ, ಆ ನಂತರ ಲಾರಿ ಆಫೀಸಿನಲ್ಲಿ ಪ್ಯೂನ್ ಕೆಲಸಕ್ಕೆ ಸೇರಿಕೊಂಡು, ಅಲ್ಲಿ ಗುಮಾಸ್ತನಾಗಿ, ಮ್ಯಾನೇಜರ್ ಆಗಿ ಕೆಲಸಮಾಡಿದ್ದರು. ನಂತರ 1972 ರಲ್ಲಿ ಮರಳೇನಹಳ್ಳಿ ಬಳಿ ಜಮೀನು ಖರೀದಿಸಿ ಅಲ್ಲಿ ಸಾವಯವ ಕೃಷಿ ಪ್ರಾರಂಭಿಸಿದ್ದರು. 
ಸಾವಯವ ಕೃಷಿಗೆ ಸಂಬಂಧಿಸಿದಂತೆ ಅಪಾರ ಜ್ಞಾನವನ್ನು ಹೊಂದಿದ್ದ ನಾರಾಯಣ ರೆಡ್ಡಿ ಅವರು ಜಪಾನ್​ನ ವಿಶ್ವವಿಖ್ಯಾತ ರೈತ ಫುಕುವೋಕಾ ಅವರ ವಿಚಾರಗಳಿಂದ ಪ್ರೇರಿತರಾಗಿ, ರಾಸಾಯನಿಕ ರಹಿತವಾಗಿ ಸಂಪೂರ್ಣವಾಗಿ ಸಾವಯವ ಪದ್ಧತಿಯನ್ನು ಅಳವಡಿಸಿಕೊಂಡು ಅದರಲ್ಲಿ ಯಶಸ್ಸು ಕಂಡಿದ್ದರು.  ಸಾವಯವ ಕೃಷಿ ತಜ್ಞ ನಾರಾಯಣ ರೆಡ್ಡಿ ನಿಧನಕ್ಕೆ ಸಿಎಂ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT