ನಾರಾಯಣ ರೆಡ್ಡಿ 
ರಾಜ್ಯ

ವಿದೇಶಗಳಲ್ಲೂ ಖ್ಯಾತಿ ಗಳಿಸಿದ್ದ ಸಾವಯವ ಕೃಷಿಕ, ನಾಡೋಜ ನಾರಾಯಣ ರೆಡ್ಡಿ ನಿಧನ: ಸಿಎಂ ಸಂತಾಪ

ಸಾವಯಕ ಕೃಷಿಯಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿದ್ದ, ಬೆಂಗಳೂರಿನ ನಿವಾಸಿ ಸಾವಯವ ಕೃಷಿಕ ನಾಡೋಜ ನಾರಾಯಣ ರೆಡ್ಡಿ (80) ನಿಧನರಾಗಿದ್ದಾರೆ.

ಬೆಂಗಳೂರು: ಸಾವಯಕ ಕೃಷಿಯಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿದ್ದ, ಬೆಂಗಳೂರಿನ ನಿವಾಸಿ ಸಾವಯವ ಕೃಷಿಕ ನಾಡೋಜ ನಾರಾಯಣ ರೆಡ್ಡಿ (80) ನಿಧನರಾಗಿದ್ದಾರೆ. 
ರಾಜ್ಯಮಟ್ಟದ ಪತ್ರಿಕೆಗಳಲ್ಲಿ ಕೃಷಿ ಸಂಬಂಧಿತ ಸಮಸ್ಯೆಗಳಿಗೆ ಸರಳ ಪರಿಹಾರವನ್ನೂ ನಾರಾಯಣ ರೆಡ್ಡಿ ಸೂಚಿಸುತ್ತಿದ್ದರು. ಕೃಷಿ ಕ್ಷೇತ್ರದಲ್ಲಿ ಕೆಲವು ಇತ್ತೀಚಿನ  ಪದ್ಧತಿಗಳನ್ನು ನಾರಾಯಣ ರೆಡ್ಡಿ ಕಟುವಾಗಿ ಟೀಕಿಸುತ್ತಿದ್ದರು. 
ಮೂವರು ಗಂಡುಮಕ್ಕಳು ಹಾಗೂಪತ್ನಿಯನ್ನು ಅಗಲಿರುವ ನಾರಾಯಣ ರೆಡ್ಡಿ ಅವರ ಅಂತ್ಯ ಸಂಸ್ಕಾರ ಜ.14 ರಂದು ಮಧ್ಯಾಹ್ನ ನಡೆಯಲಿದೆ. ಹೋಟೆಲ್​ನಲ್ಲಿ ಕ್ಲೀನರ್​ ಆಗಿ ಕೆಲಸ ಮಾಡುತ್ತಿದ್ದ ನಾರಾಯಣ ರೆಡ್ಡಿ, ಆ ನಂತರ ಲಾರಿ ಆಫೀಸಿನಲ್ಲಿ ಪ್ಯೂನ್ ಕೆಲಸಕ್ಕೆ ಸೇರಿಕೊಂಡು, ಅಲ್ಲಿ ಗುಮಾಸ್ತನಾಗಿ, ಮ್ಯಾನೇಜರ್ ಆಗಿ ಕೆಲಸಮಾಡಿದ್ದರು. ನಂತರ 1972 ರಲ್ಲಿ ಮರಳೇನಹಳ್ಳಿ ಬಳಿ ಜಮೀನು ಖರೀದಿಸಿ ಅಲ್ಲಿ ಸಾವಯವ ಕೃಷಿ ಪ್ರಾರಂಭಿಸಿದ್ದರು. 
ಸಾವಯವ ಕೃಷಿಗೆ ಸಂಬಂಧಿಸಿದಂತೆ ಅಪಾರ ಜ್ಞಾನವನ್ನು ಹೊಂದಿದ್ದ ನಾರಾಯಣ ರೆಡ್ಡಿ ಅವರು ಜಪಾನ್​ನ ವಿಶ್ವವಿಖ್ಯಾತ ರೈತ ಫುಕುವೋಕಾ ಅವರ ವಿಚಾರಗಳಿಂದ ಪ್ರೇರಿತರಾಗಿ, ರಾಸಾಯನಿಕ ರಹಿತವಾಗಿ ಸಂಪೂರ್ಣವಾಗಿ ಸಾವಯವ ಪದ್ಧತಿಯನ್ನು ಅಳವಡಿಸಿಕೊಂಡು ಅದರಲ್ಲಿ ಯಶಸ್ಸು ಕಂಡಿದ್ದರು.  ಸಾವಯವ ಕೃಷಿ ತಜ್ಞ ನಾರಾಯಣ ರೆಡ್ಡಿ ನಿಧನಕ್ಕೆ ಸಿಎಂ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT