ಎಚ್​.ಡಿ.ದೇವೇಗೌಡ 
ರಾಜ್ಯ

ದುಷ್ಟಶಕ್ತಿಗಳ ಊರುಭಂಗವಾಗಲಿದೆ: ಸಂಕ್ರಾಂತಿ ಶುಭಾಶಯಗಳೊಡನೆ ವಿರೋಧಿಗಳಿಗೆ ಟಾಂಗ್ ಕೊಟ್ಟ ದೇವೇಗೌಡ

ರೈತ ಪರ ಸರ್ಕಾರವನ್ನು ಕದಡಿಸಲು ಯತ್ನಿಸುತ್ತಿರುವ ದುಷ್ಟ ಶಕ್ತಿಗಳ ಊರುಭಂಗವಾಗಲಿದ್ದು ಈ ಪರ್ವ ಅನ್ನದಾತ ರೈತರು ಹಾಗೂ ಸಮಸ್ತ ಜನತೆಯ ಮನ-ಮನೆಗಳಲ್ಲಿ ಸುಖ,....

ಬೆಂಗಳೂರು:  ರೈತ ಪರ ಸರ್ಕಾರವನ್ನು ಕದಡಿಸಲು ಯತ್ನಿಸುತ್ತಿರುವ ದುಷ್ಟ ಶಕ್ತಿಗಳ ಊರುಭಂಗವಾಗಲಿದ್ದು ಈ ಪರ್ವ ಅನ್ನದಾತ ರೈತರು ಹಾಗೂ ಸಮಸ್ತ ಜನತೆಯ ಮನ-ಮನೆಗಳಲ್ಲಿ  ಸುಖ, ಶಾಂತಿ, ಸಮೃದ್ಧಿ ತರಲಿ ಎಂದು‌ ಹಾರೈಸುತ್ತೇನೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ಜೆಡಿಎಸ್​ ವರಿಷ್ಠ ಎಚ್​.ಡಿ.ದೇವೇಗೌಡ ನಾಡಿನ ಜನತೆಗೆ ಸಂಕ್ರಾಂತಿಯ ಶುಭಾಶಯ ಕೋರಿದ್ದಾರೆ.
ದೇವೇಗೌಡರು ತಮ್ಮ ಟ್ವೀಟ್ ಮೂಲಕ ಸಮಸ್ತ ಜನತೆಗೆ ಸಂಕ್ರಾಂತಿ ಹಬ್ಬದ ಶುಭಾಶಯ ಕೋರುತ್ತಲೇ ರಾಜ್ಯ ಸರ್ಕಾರವನ್ನು ಬೀಳಿಸಲೆತ್ನಿಸುವ ವಿರೋಧಿಗಳಿಗೆ ಟಾಂಗ್ ನೀಡಿದ್ದಾರೆ. 
"ಸಮಸ್ತರಿಗೂ ಸುಗ್ಗಿ ಹಬ್ಬ ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯಗಳು. ಈ ಸಂದರ್ಭದಲ್ಲಿ ರೈತ ಪರ ಸರ್ಕಾರವನ್ನು ಕದಡಿಸಲು ಯತ್ನಿಸುತ್ತಿರುವ ದುಷ್ಟ ಶಕ್ತಿಗಳ ಊರುಭಂಗವಾಗಲಿದ್ದು ಈ ಪರ್ವ ಅನ್ನದಾತ ರೈತರು ಹಾಗೂ ಸಮಸ್ತ ಜನತೆಯ ಮನ-ಮನೆಗಳಲ್ಲಿ  ಸುಖ, ಶಾಂತಿ, ಸಮೃದ್ಧಿ ತರಲಿ ಎಂದು‌ ಹಾರೈಸುತ್ತೇನೆ." ದೇವೇಗೌಡ ಟ್ವೀಟ್ ಮಾಡಿದ್ದಾರೆ.
ಜೆಡಿಎಸ್ ಶಾಸಕರನ್ನು ಕಮಲ ಪಕ್ಷದ ನಾಯಕರು ತಮ್ಮತ್ತ ಸೆಳೆಯಲು ಯತ್ನಿಸುತ್ತಿದ್ದಾರೆ ಎಂಬ ಸುದ್ದಿ ಎರಡು ದಿನಗಳಿಂದ ಹರಿದಾಡುತ್ತಿರುವ ಹಿನ್ನೆಲೆಯಲಿ ದೇವೇಗೌಡರ ಈ ಟ್ವೀಟ್ ಅವರಲ್ಲಿನ ಆತಂಕಕ್ಕೆ ಸಾಕ್ಷಿಯಂತಿದೆ.
ಇನ್ನು ಆಪರೇಷನ್ ಕಮಲ್ದ ಭಯದಿಂದಾಗಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಮ್ಮ ಪಕ್ಷದ ಎಲ್ಲಾ ಶಾಸಕರೆಅನ್ನು ಇಂದು ಸಂಜೆಯೊಳಗೆ ಬೆಂಗಳೂರಿಗೆ ಬರಹೇಳಿದ್ದು ಶಾಸಕರನ್ನು ರೆಸಾರ್ಟ್​​ಗೆ ಶಿಫ್ಟ್ ಮಾಡುವ ಯೋಜನೆ ಇದೆ ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT