ಮುಖ್ಯಮಂತ್ರಿ ಕುಮಾರಸ್ವಾಮಿ 
ರಾಜ್ಯ

ಸಮ್ಮಿಶ್ರ ಸರ್ಕಾರ ಗಡಗಡ: ಬೆಂಬಲ ಹಿಂಪಡೆದ ಇಬ್ಬರು ಶಾಸಕರು!

ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಪತನಗೊಳ್ಳುವ ಸಾಧ್ಯತೆ ಇದ್ದು, ಇಬ್ಬರು ಪಕ್ಷೇತರ ಶಾಸಕರು ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆಯುವುದಾಗಿ ಘೋಷಿಸಿದ್ದಾರೆ.

ಬೆಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಪತನಗೊಳ್ಳುವ ಸಾಧ್ಯತೆ ಇದ್ದು, ಇಬ್ಬರು ಪಕ್ಷೇತರ ಶಾಸಕರು ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆಯುವುದಾಗಿ ಘೋಷಿಸಿದ್ದಾರೆ. 
ಮಾಜಿ ಅರಣ್ಯ ಸಚಿವ ಆರ್ ಶಂಕರ್, ಹಾಗೂ ಮುಳಬಾಗಿಲು ಪಕ್ಷೇತರ ಶಾಸಕ ಹೆಚ್ ನಾಗೇಶ್ ಕಾಂಗ್ರೆಸ್- ಜೆಡಿಎಸ್ ನೇತೃತ್ವದ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆಯುವುದಾಗಿ ಘೋಷಿಸಿದ್ದಾರೆ. ಅಷ್ಟೇ ಅಲ್ಲದೇ ರಾಜ್ಯಪಾಲರನ್ನು ಭೇಟಿ ಮಾಡುವುದಕ್ಕೆ ಸಮಯವನ್ನೂ ಕೇಳಿದ್ದಾರೆ. 
ಬೆಂಬಲ ವಾಪಸ್ ಪಡೆಯುವುದರ ಬಗ್ಗೆ ಮಾತನಾಡಿರುವ ಮಾಜಿ ಅರಣ್ಯ ಸಚಿವ ಆರ್ ಶಂಕರ್, ಸಮ್ಮಿಶ್ರ ಸರ್ಕಾರದಲ್ಲಿ ಶಾಸಕರಿಗೆ ಗೌರವ ಇಲ್ಲ. ಸರ್ಕಾರದ ಕಾರ್ಯವೈಖರಿಯಿಂದ ಬೇಸರವಾಗಿದೆ. ನಮಗೆ ನೋವಾಗಿರುವ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ನೀಡಿರುವ ಬೆಂಬಲವನ್ನು ವಾಪಸ್ ಪಡೆಯುತ್ತಿರುವುದಾಗಿ ತಿಳಿಸಿದ್ದಾರೆ. 
ಇದೇ ವೇಳೆ ಮಾತನಾಡಿರುವ ಮುಳಬಾಗಿಲು ಶಾಸಕ ಹೆಚ್ ನಾಗೇಶ್ ಉತ್ತಮ ಆಡಳಿತಕ್ಕಾಗಿ ಸಮ್ಮಿಶ್ರ ಸರ್ಕಾರಕ್ಕೆ ಬೆಂಬಲ ನೀಡಿದ್ದೆ ಆದರೆ ಈ ಸರ್ಕಾರ ಉತ್ತಮ ಆಡಳಿತ ನೀಡುತ್ತಿಲ್ಲ. ಜನರ ಆಶಯ ಈಡೇರಿಸುವಲ್ಲಿ ಸರ್ಕಾರ ವಿಫಲಗೊಂಡಿದೆ. ಸರ್ಕಾರದಿಂದ ನಮಗೆ ಸೂಕ್ತ ಸ್ಪಂದನೆ ಸಿಗುತ್ತಿಲ್ಲ.  ಹೀಗಾಗಿ ನಾನು ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆದು ಬಿಜೆಪಿಗೆ ಬೆಂಬಲ ನೀಡುತ್ತೇನೆ, ಬೆಂಬಲ ಹಿಂಪಡೆಯುವಂತೆ ಯಾರೂ ಒತ್ತಡ ಹಾಕಿಲ್ಲ ಎಂದು ನಾಗೇಶ್ ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

NICE ವಿವಾದ: ದೇವೇಗೌಡರು ಬೇಕಿದ್ರೆ ಕೋರ್ಟ್‌ಗೆ ಹೋಗಲಿ, ಉಪವಾಸ ಮಾಡಲಿ; ಮಾಜಿ ಪ್ರಧಾನಿ ಪತ್ರಕ್ಕೆ CM ಡಿಕೆಶಿ ತಿರುಗೇಟು

ಸಾಕು ಮಾಡಿ: ಸೇವಾಶ್ರಯ ಪ್ರಕರಣದಲ್ಲಿ ಕೊನೆಗೂ ಅಭಿಷೇಕ್ ಬ್ಯಾನರ್ಜಿಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್, ಬಂಧನಕ್ಕೆ ತಡೆ!

ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌; ಶೇ. 7.5 ರಷ್ಟು ಮೀಸಲಾತಿ – ಕರಡು ನಿಯಮ ಪ್ರಕಟ

ಸ್ವಚ್ಛ ವಾಯು ಸರ್ವೇಕ್ಷಣ 2026: ಬೆಂಗಳೂರು, ಶ್ರೀನಗರ ಹಿಂದಿಕ್ಕಿದ ದೆಹಲಿ; ಅತ್ಯಂತ ಸ್ವಚ್ಛ ಗಾಳಿ ಯಾವ ನಗರದಲ್ಲಿದೆ ಗೊತ್ತಾ?

ಸತ್ಯ ನಿಕೇತನ ಪಿಜಿ ಕುಸಿತದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ದೆಹಲಿ ಹೈಕೋರ್ಟ್ ಆದೇಶ; ದುರಂತಕ್ಕೆ ಮಾಲೀಕನಷ್ಟೇ ಅಲ್ಲ MCD, DU ಸಹ ಹೊಣೆ!